Advertisement

ಒಮಿಕ್ರಾನ್‌: ಭಾರತೀಯರು ಸುರಕ್ಷಿತ

10:46 AM Dec 01, 2021 | Team Udayavani |

ಹೊಸದಿಲ್ಲಿ: ಒಮಿಕ್ರಾನ್‌ ಸೇರಿದಂತೆ ಕೊರೊನಾದ ಯಾವುದೇ ರೂಪಾಂತರಿ ಬಂದರೂ ಬಹುತೇಕ ಭಾರತೀಯರು ಸುರಕ್ಷಿತವಾಗಿರಲಿದ್ದಾರೆ. ಹಾಗಾಗಿ ಹೊಸ ರೂಪಾಂತರದ ಬಗ್ಗೆ ಭಯಪಡಬೇಕಾಗಿಲ್ಲ.

Advertisement

ಹೀಗೆಂದು ಹೇಳಿದ್ದು ದೇಶದ ಪ್ರಮುಖ ವೈರಾಲಜಿಸ್ಟ್‌ ಹಾಗೂ ಕೋವಿಡ್‌ ಸಲಹಾ ಸಮಿತಿಯ ಮಾಜಿ ಅಧ್ಯಕ್ಷ ಡಾ| ಶಾಹಿದ್‌ ಜಮೀಲ್‌. ಇಡೀ ದೇಶವೇ ಒಮಿಕ್ರಾನ್‌ ಭೀತಿಯಲ್ಲಿರುವಾಗ ಜಮೀಲ್‌ ಅವರು ಈ ಹೇಳಿಕೆ ನೀಡುವ ಮೂಲಕ ಭಾರತೀಯರಿಗೆ ರಿಲೀಫ್ ನೀಡಿದ್ದಾರೆ.

ಎಲ್ಲರೂ ಎಚ್ಚರಿಕೆಯಿಂದಿರಬೇಕು. ಆದರೆ ಭೀತಿ ಪಡಬೇಕಾಗಿಲ್ಲ. ಡೆಲ್ಟಾ ರೂಪಾಂತರಿಯಿಂದ ಭಾರತದಲ್ಲಿ ಎದ್ದ ಎರಡನೇ ಅಲೆಯ ವೇಳೆ ಸಾಕಷ್ಟು ಜನರು ಸೋಂಕಿಗೆ ಒಳಗಾಗಿದ್ದಾರೆ. ದೇಶದ ಶೇ.67ರಷ್ಟು ಮಂದಿಯ ದೇಹದಲ್ಲಿ ಪ್ರತಿಕಾಯ ಸೃಷ್ಟಿಯಾಗಿದೆ. ಹೀಗಾಗಿ ಯಾವುದೇ ರೂಪಾಂತರಿ ಬಂದರೂ ಭಾರತೀಯರು ಸುರಕ್ಷಿತವಾಗಿರಲಿದ್ದಾರೆ ಎಂದು ಡಾ| ಜಮೀಲ್‌ ಅಭಿಪ್ರಾಯಪಟ್ಟಿದ್ದಾರೆ.

ಒಮಿಕ್ರಾನ್‌ ದೃಢಪಟ್ಟಿಲ್ಲ: ದೇಶದಲ್ಲಿ ಒಮಿಕ್ರಾನ್‌ ಪತ್ತೆಯಾಗಿಲ್ಲ. ಅದನ್ನು ದೇಶದೊಳಕ್ಕೆ ಆಗಮಿಸಲು ಅವಕಾಶ ನೀಡುವುದೇ ಇಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವಿಯಾ ರಾಜ್ಯಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ತಿಳಿಸಿದ್ದಾರೆ.

ಶಾಲೆ ಆರಂಭ ತಡ: ಒಮಿಕ್ರಾನ್‌ ಭೀತಿ ಹಿನ್ನೆಲೆಯಲ್ಲಿ ಮುಂಬಯಿಯಲ್ಲಿ ಶಾಲೆಗಳ ಪುನರಾರಂಭವನ್ನು ಡಿ.15ಕ್ಕೆ ಮುಂದೂಡಲಾಗಿದೆ ಎಂದು ಬೃಹನ್ಮುಂಬಯಿ ನಗರ ಪಾಲಿಕೆ ಹೇಳಿದೆ. ಡಿ.1ರಂದು ಶಾಲಾರಂಭ ಮಾಡಲು ಈ ಮೊದಲು ನಿರ್ಧರಿಸಲಾಗಿತ್ತು. ಈ ನಡುವೆ, ಆಫ್ರಿಕಾ ರಾಷ್ಟ್ರಗಳಿಂದ ಕಳೆದ 15 ದಿನಗಳಲ್ಲಿ ಒಂದು ಸಾವಿರ ಮಂದಿ ಮುಂಬಯಿಗೆ ಬಂದಿಳಿದಿದ್ದಾರೆ. ಆದರೆ ಈ ಪೈಕಿ ಕೇವಲ 466 ಮಂದಿಯ ಮಾಹಿತಿಯಷ್ಟೇ ಸಿಕ್ಕಿದೆ ಎಂದು ಬಿಎಂಸಿ ತಿಳಿಸಿದೆ. ಜಪಾನ್‌ನಲ್ಲಿ ಒಮಿಕ್ರಾನ್‌ನ ಮೊದಲ ಪ್ರಕರಣ ಮಂಗಳವಾರ ಪತ್ತೆಯಾಗಿದೆ.

Advertisement

ಇದನ್ನೂ ಓದಿ:ಭ್ರಷ್ಟಾಚಾರ ಪ್ರಕರಣ: ವಿಚಾರಣೆಗೆ ಹಾಜರಾದ ಅನಿಲ್‌ ದೇಶ್‌ಮುಖ್‌

ಆರ್‌ಟಿ-ಪಿಸಿಆರ್‌ನಿಂದ ಒಮಿಕ್ರಾನ್‌ ಪತ್ತೆ ಸಾಧ್ಯಲಸಿಕೆ ಪಡೆಯದವರಿಗೆ ಉಚಿತ ಚಿಕಿತ್ಸೆ ಇಲ್ಲ!
ಲಸಿಕೆ ಪಡೆಯದವರು, ಕೊರೊನಾ ಮುನ್ನೆಚ್ಚರಿಕ ಕ್ರಮಗಳಿಗೆ ಸಹಕಾರ ನೀಡದವರಿಗೆ ಸೋಂಕು ತಗಲಿದರೆ ಸರಕಾರ ಉಚಿತ ಚಿಕಿತ್ಸೆ ನೀಡುವುದಿಲ್ಲ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ ಹೇಳಿದ್ದಾರೆ. ಆರೋಗ್ಯ ಸಮಸ್ಯೆಯಿರುವ ಕಾರಣಕ್ಕೆ ಅಥವಾ ಅಲರ್ಜಿ ಇರುವ ಕಾರಣಕ್ಕೆ ಲಸಿಕೆ ಪಡೆಯದವರು ಅದಕ್ಕೆ ಸಂಬಂಧಿಸಿ ಸರಕಾರಿ ವೈದ್ಯರಿಂದ ಪ್ರಮಾಣಪತ್ರ ತರಬೇಕು ಎಂದೂ ಸೂಚಿಸಿದ್ದಾರೆ.

“ಒಮಿಕ್ರಾನ್‌ ಅನ್ನು ರ್ಯಾಪಿಡ್‌ ಆ್ಯಂಟಿಜೆನ್‌ ಟೆಸ್ಟ್‌ (ಆರ್‌ಎಟಿ), ಆರ್‌ಟಿ-ಪಿಸಿಆರ್‌ ಟೆಸ್ಟ್‌ ಮೂಲಕ ಪತ್ತೆ ಹಚ್ಚಲು ಸಾಧ್ಯವಿದೆ’ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್‌ ಭೂಷಣ್‌ ಹೇಳಿದ್ದಾರೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಕಾರ್ಯದರ್ಶಿಗಳ ಜತೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ವಿಮಾನ ನಿಲ್ದಾಣಗಳಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರು ವಿಶೇಷವಾಗಿ, ಸೋಂಕಿನಿಂದಾಗಿ ಅಪಾಯಕಾರಿ ಎಂದು ಪರಿಗಣಿಸಲಾಗಿರುವ ದೇಶಗಳಿಂದ (ಹೈರಿಸ್ಕ್) ಬಂದಿರುವವರ ಮೇಲೆ ನಿಗಾ ಇರಿಸಬೇಕು. ಹೋಮ್‌ ಐಸೊಲೇಶನ್‌ಗೆ ಶಿಫಾರಸು ಮಾಡಲಾದ ಪ್ರಕರಣಗಳ ಮೇಲೆ ಹೆಚ್ಚಿನ ನಿಗಾ ಇರಿಸಬೇಕು ಎಂದಿದ್ದಾರೆ. ವಿದೇಶಗಳಿಂದ ಬಂದವರ ಮನೆಗೆ ಖುದ್ದಾಗಿ ಭೇಟಿ ನೀಡಬೇಕು. 8ನೇ ದಿನದ ಪರೀಕ್ಷೆಯ ಅನಂತರವೂ ಅವರ ಮೇಲೆ ನಿಗಾ ಇರಿಸಬೇಕು ಎಂದಿದ್ದಾರೆ. ಇದೇ ವೇಳೆ ಹೈರಿಸ್ಕ್ ದೇಶಗಳಿಂದ ಬಂದವರಿಗೆ ಕಟ್ಟು ನಿಟ್ಟಿನ ನಿಯಮ ಮಂಗಳವಾರ ರಾತ್ರಿಯಿಂದಲೇ ಜಾರಿಯಾಗಿದೆ.

 

 

Advertisement

Udayavani is now on Telegram. Click here to join our channel and stay updated with the latest news.

Next