Advertisement

7ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಪೇಜಾವರ ಶ್ರೀಗಳ ಭೇಟಿ

11:31 PM Jun 04, 2019 | Lakshmi GovindaRaj |

ಸುಬ್ರಹ್ಮಣ್ಯ: ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಜೂ. 7ರಂದು ಆಗಮಿಸಲಿರುವುದಾಗಿ ಮೂಲಗಳಿಂದ ತಿಳಿದು ಬಂದಿದ್ದು, ಸರ್ಪಸಂಸ್ಕಾರ ವಿಚಾರದಲ್ಲಿ ಮಠ-ದೇವಸ್ಥಾನದ ನಡುವೆ ತಲೆದೋರಿರುವ ವಿವಾದವನ್ನು ಪರಿಹರಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

Advertisement

ಕ್ಷೇತ್ರದಲ್ಲಿ ಸರ್ಪಸಂಸ್ಕಾರಕ್ಕೆ ಸಂಬಂಧಿಸಿ ಸರಣಿ ಅಹಿತಕರ ಘಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಸಂಪುಟ ಶ್ರೀ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠದ ಸಿಬ್ಬಂದಿ ಕುಮಾರ ಬನ್ನಿಂತಾಯ ಅವರ ಮೇಲಿನ ಹಲ್ಲೆ ವಿಚಾರಕ್ಕೆ ಸಂಬಂಧಿಸಿ ಪೇಜಾವರ ಶ್ರೀಗಳು ಆಗಮಿಸುತ್ತಿರುವುದು ಎಂದು ಮೂಲಗಳು ತಿಳಿಸಿವೆ.

ಕ್ಷೇತ್ರದಲ್ಲಿ ಅಹಿತಕರ ಘಟನೆಗಳು ಮರುಕಳಿಸದಂತೆ ಹಾಗೂ ಎರಡು ಧಾರ್ಮಿಕ ಕೇಂದ್ರಗಳ ನಡುವೆ ಉತ್ತಮ ಬಾಂಧವ್ಯ ಸೃಷ್ಟಿಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅವರು ಸಲಹೆಗಳನ್ನು ನೀಡುವ ನಿರೀಕ್ಷೆಯಿದೆ. ಗೊಂದಲ ನಿವಾರಿಸಿ ದೇವಸ್ಥಾನ ಮತ್ತು ಮಠದ ನಡುವೆ ಸೌಹಾರ್ದ ವಾತಾವರಣ ಮೂಡಿಸಲು ಪೇಜಾವರ ಶ್ರೀಗಳು

-ಮಧ್ಯಪ್ರವೇಶಿಸಬೇಕು ಎನ್ನುವ ಅಭಿಪ್ರಾಯಗಳನ್ನು ಹಿಂದೂ ಸಂಘಟನೆಗಳ ಸಹಿತ ಕ್ಷೇತ್ರದ ಮಠ-ಮಂದಿರದ ಭಕ್ತರು ಈ ಹಿಂದೆ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಶ್ರೀಗಳ ಕುಕ್ಕೆ ಕ್ಷೇತ್ರ ಭೇಟಿ ಬಹಳಷ್ಟು ಮಹತ್ವ ಪಡೆದುಕೊಂಡಿದೆ. ಅವರ ಭೇಟಿಯನ್ನು ಸುಬ್ರಹ್ಮಣ್ಯ ಮಠ ಖಚಿತಪಡಿಸಿದ್ದು ಉದ್ದೇಶವೇನೆಂದು ಮಾತ್ರ ತಿಳಿಸಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next