Advertisement

ಭಾರೀ ಮಳೆ: ನೀರಿನಲ್ಲಿ ಕೊಚ್ಚಿಕೊಂಡು ಹೋದ ನದಿ ಬಳಿ ಪಾರ್ಕ್ ಮಾಡಿದ್ದ ಕಾರು

12:49 PM Jun 25, 2023 | Team Udayavani |

ಚಂಡೀಗಢ: ಭಾರೀ ಮಳೆ ಸುರಿದ ಪರಿಣಾಮ ಪಾರ್ಕ್‌ ಮಾಡಿದ ಕಾರೊಂದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ಹರಿಯಾಣದ ಪಂಚಕುಲದಲ್ಲಿ ಭಾನುವಾರ  (ಜೂ.25 ರಂದು) ನಡೆದಿದೆ.

Advertisement

ಹರಿಯಾಣದಲ್ಲಿ ನಿರಂತರವಾಗಿ ಮಳೆ ಸುರಯುತ್ತಿದ್ದು, ಮಹಿಳೆಯೊಬ್ಬರು ಪಂಚಕುಲದ ಖರಕ್ ಮಂಗೋಲಿ ನದಿಯ ದಡದಲ್ಲಿ ಕಾರನ್ನು ನಿಲ್ಲಿಸಿದ್ದರು. ಆದರೆ ಭಾರೀ ಮಳೆಯಿಂದಾಗಿ ನದಿಯಲ್ಲಿ ನೀರು ಹರಿದಿದ್ದರಿಂದ ಕಾರು ನದಿಯಲ್ಲಿ ಕೊಚ್ಚಿ ಹೋಗಿದೆ. ಈ ವೇಳೆ ಕಾರಿನಲ್ಲಿದ್ದ ಮಹಿಳೆಯೂ ಸಂಕಷ್ಟದಲ್ಲಿ ಸಿಲುಕಿದ್ದು, ಕೂಡಲೇ ಅಲ್ಲಿದ್ದ ಸ್ಥಳೀಯರು ಹಗ್ಗವನ್ನು ಬಳಸಿ ಮಹಿಳೆಯನ್ನು ರಕ್ಷಿಸಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸದ್ಯ ಮಳೆಯ ನಡುವೆಯೇ ಕಾರನ್ನು ಕ್ರೇನ್‌ ಬಳಸಿ ನೀರಿನಿಂದ ಹೊರ ತೆಗೆಯುವ ಪ್ರಯತ್ನ ಮುಂದುವರಿದಿದೆ ಎಂದು ವರದಿ ತಿಳಿಸಿದೆ.

ಘಟನೆಯ ವಿಡಿಯೋ ಸೆರೆಯಾಗಿದ್ದು, ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next