Advertisement

ಪೊದೆಗೆ ತಳ್ಳಿ ಬಿಜೆಪಿ ಅಭ್ಯರ್ಥಿಗೆ ಥಳಿತ

09:46 AM Nov 26, 2019 | Hari Prasad |

ಕೋಲ್ಕತಾ: ಪಶ್ಚಿಮ ಬಂಗಾಲದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ನಾಯಕರೊಬ್ಬರನ್ನು ಥಳಿಸುತ್ತಿರುವ ದೃಶ್ಯ ವೈರಲ್‌ ಆಗಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

Advertisement

ಪಶ್ಚಿಮ ಬಂಗಾಲದ ಕರೀಮ್‌ಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಯಪ್ರಕಾಶ್‌ ಮಜುಂದಾರ್‌ ಅವರನ್ನು ಕೆಲ ದುಷ್ಕರ್ಮಿಗಳು ಅಟ್ಟಿಸಿಕೊಂಡು ಬರುವ ಮತ್ತು ಪೊದೆಗೆ ತಳ್ಳಿ, ಕಾಲಲ್ಲಿ ಒದೆಯುತ್ತಿರುವ ದೃಶ್ಯವೂ ವೀಡಿಯೋದಲ್ಲಿ ಸೆರೆಯಾಗಿದೆ. ಘಟನೆಯಿಂದಾಗಿ ಪಶ್ಚಿಮ ಬಂಗಾಲದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇಲ್ಲವೆಂದು ಸಾಬೀತಾಗುತ್ತದೆ ಎಂದು ಮಜುಂದಾರ್‌ ಆರೋಪಿಸಿದ್ದಾರೆ.

ಬಿಜೆಪಿ ನಾಯಕ ಮುಕುಲ್‌ ರಾಯ್‌ ಘಟನೆ ವಿರುದ್ಧ ಚುನಾವಣಾ ಆಯೋಗಕ್ಕೆ ಪತ್ರ ಬರೆದು ದೂರು ಸಲ್ಲಿಸಿದ್ದಾರೆ. ಆಯೋಗ ಕೂಡ ಪ್ರಕರಣವನ್ನು ಗಂಭೀರವಾಗಿಯೇ ಪರಿಗಣಿಸಿ ರಾಜ್ಯ ಸರಕಾರದಿಂದ ವರದಿ ಪಡೆಯಲು ತೀರ್ಮಾನಿಸಿದೆ. ಪಶ್ಚಿಮ ಬಂಗಾಲ ವಿಧಾನಸಭೆಯಲ್ಲಿ ಬಿಜೆಪಿ ಎಂಟು ಸ್ಥಾನಗಳಲ್ಲಿ ಗೆದ್ದಿದೆ.

Advertisement

Udayavani is now on Telegram. Click here to join our channel and stay updated with the latest news.

Next