Advertisement

Karnataka election result; ಮೋದಿ ಅಲೆ ಮುಗಿದಿದೆ: ಸಂಜಯ್ ರಾವತ್

03:06 PM May 14, 2023 | Team Udayavani |

ಮುಂಬೈ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಮೋಘ ಗೆಲುವು ಸಾಧಿಸುವ ಮೂಲಕ ರಾಜ್ಯದಲ್ಲಿ ಪ್ರಧಾನಿ ಮೋದಿ ಅಲೆ ಮುಗಿದಿದೆ ಎಂದು ಶಿವಸೇನಾ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು ಬಿಜೆಪಿಯ ಸೋಲು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸೋಲು ಎಂದು ಹೇಳಿದ್ದಾರೆ.

ಚುನಾವಣಾ ಪ್ರಚಾರದ ವೇಳೆಯಲ್ಲಿ ಪ್ರಧಾನಿ ಮೋದಿ, ಜೈ ಬಜರಂಗ ಬಲಿ ಘೋಷಣೆ ಕೂಗಿ ಮತ ಹಾಕುವಂತೆ ಮತದಾರರಿಗೆ ಮನವಿ ಮಾಡಿದ್ದರು. ಆದ್ದರಿಂದ ಈ ಚುನಾವಣಾ ಫಲಿತಾಂಶದಲ್ಲಿ ಮೋದಿ ಹಾಗೂ ಅಮಿತ್ ಶಾ ಅವರ ಸೋಲಾಗಿದೆ ಎಂದರು.

ಕರ್ನಾಟಕದ ಚುನಾವಣೆಯಲ್ಲಿ ಏನು ಫಲಿತಾಂಶ ಬಂದಿದೆಯೋ ಅದೇ ಫಲಿತಾಂಶ 2024ರ ಲೋಕಸಭಾ ಚುನಾವಣೆಯಲ್ಲಿಯೂ ಬರಲಿದೆ ಎಂದು ಹೇಳಿದರು.


2024ರ ಲೋಕಸಭೆ ಚುನಾವಣೆಗೆ ನಮ್ಮ ತಯಾರಿ ಆರಂಭವಾಗಿದ್ದು, ಇಂದು ಶರದ್ ಪವಾರ್ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿದೆ, ಈ ಸಭೆಯಲ್ಲಿ 2024ರ ಚುನಾವಣೆ ಕುರಿತು ಚರ್ಚೆ ನಡೆಸಲಿದ್ದೇವೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next