Advertisement

ಮತ್ತೊಮ್ಮೆ ವಿಶ್ವನಾಥ್‌ ಅವರ ಮನವೊಲಿಸುವ ಪ್ರಯತ್ನ ಮಾಡುತ್ತೇನೆ

11:50 AM Jun 21, 2019 | Vishnu Das |

ಬೆಂಗಳೂರು: ಜೆಡಿಎಸ್‌ ಅಧ್ಯಕ್ಷ ಸ್ಥಾನಕ್ಕೆ ನೀಡಿರುವ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯುವಂತೆ ಮತ್ತೊಮ್ಮೆ ಎಚ್‌.ವಿಶ್ವನಾಥ್‌ ಅವರ ಮನವೊಲಿಸುವ ಪ್ರಯತ್ನ ಮಾಡುತ್ತೇವೆ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿಕೆ ನೀಡಿದ್ದಾರೆ.

Advertisement

ವಿಶ್ವನಾಥ್‌ ಅವರು ರಾಜೀನಾಮೆ ಅಂಗೀಕರಿಸಿ ಇಲ್ಲವಾದಲ್ಲಿ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಹೇಳಿದ ಬೆನ್ನಲ್ಲೆ ಜೆಡಿಎಸ್‌ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಎಚ್‌ಡಿಡಿ ಈ ಹೇಳಿಕೆ ನೀಡಿದ್ದಾರೆ.

ಇಂದು ಹಿಂದುಳಿದ ವರ್ಗಗಳ ಸಭೆ ಮಾಡುತ್ತಿದ್ದು ವಿಶ್ವನಾಥ್‌ ಅವರೂ ಬರುತ್ತಿದ್ದಾರೆ. ಅಲ್ಲಿ ಮುಖಂಡರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.

ವಿಶ್ವನಾಥ್‌ ಅವರು ಪಕ್ಷ ಬಿಡುವುದಿಲ್ಲ, ಅಧ್ಯಕ್ಷ ಸ್ಥಾನ ಮಾತ್ರ ಬಿಡುತ್ತಿದ್ದೇನೆ ಎಂದಿದ್ದಾರೆ. ಗುರುವಾರ ಬಂದು ಹೇಳುತ್ತೇನೆ ಎಂದಿದ್ದಾರೆ, ಆ ಬಗ್ಗೆ ಹೆಚ್ಚೇನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ನಾನು ಅಲ್ಪಸಂಖ್ಯಾತರಿಗೆ ಏನೂ ಮಾಡಲಿಲ್ಲ ಎನ್ನುವುದು ತಪ್ಪು, ಸಂಪುಟದಲ್ಲಿ ಮುಸ್ಲಿಮರಿಗೆ ಅವಕಾಶ ನೀಡಲಿಲ್ಲ ಎನ್ನುವ ಕುರಿತು ನೋವಿದೆ. ನನ್ನ ಹಾಗೂ ಸಿಎಂ ಕುಮಾರಸ್ವಾಮಿ ಅವರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದರು.

Advertisement

ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ರಾಜಕೀಯ ಮಾತನಾಡಿಲ್ಲ. ನಾಯಕರು ಬಹಿರಂಗ ಹೇಳಿಕೆ ಕೊಡದಂತೆ ಸೂಚನೆನೀಡಲು ಹೇಳಿದ್ದೇನೆ. ಬೇರೆ ವಿಚಾರಗಳ ಬಗ್ಗೆ ಮಾತನಾಡಿಲ್ಲ ಎಂದರು.

ಸಿದ್ದರಾಮಯ್ಯ ಅವರ ಸಲಹೆ ಮೇರೆಗೆ ಒಂದು ಸ್ಥಾನ ಕಾಂಗ್ರೆಸ್‌ಗೆ ನೀಡಿದ್ದೇವೆ. ಒಂದು ಸ್ಥಾನ ಹೊಯಿತು ಎಂದು ನಾನು ಚಿಂತೆ ಮಾಡುವುದಿಲ್ಲ. ಸರ್ಕಾರಕ್ಕೆ ಕೆಟ್ಟ ಹೆಸರು ಬರದಂತೆ ನೋಡಿಕೊಳ್ಳಲು ಮನವಿ ಮಾಡಿದ್ದೇನೆಎಂದರು.

ಇದೇ ವೇಳೆ ಮಾಧ್ಯಮಗಳು ಒಳ್ಳೆಯ ಕೆಲಸ ಮಾಡಿದರೆ ಹೇಳುತ್ತಿಲ್ಲ ಎಂದು ಬೇಸರ ಹೊರ ಹಾಕಿದರು.

Advertisement

Udayavani is now on Telegram. Click here to join our channel and stay updated with the latest news.

Next