Advertisement

ಬೆಳ್ತಂಗಡಿಯ ಕರಾಯದ ಕೋವಿಡ್ ಸೋಂಕಿತ ಗುಣಮುಖ; ಇನ್ನೂ 7 ಮಂದಿಗೆ ನಡೆಯುತ್ತಿದೆ ಚಿಕಿತ್ಸೆ

09:13 AM Apr 11, 2020 | Hari Prasad |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಓರ್ವ ಕೋವಿಡ್ ಪಾಸಿಟಿವ್ ವ್ಯಕ್ತಿ ಗುಣಮುಖರಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ 21 ವರ್ಷದ ಯುವಕ  ಗುಣಮುಖರಾದವರು.

Advertisement

ಈ ಯುವಕ ಮಾ.21 ರಂದು ದುಬೈನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಅಲ್ಲಿಂದ ಕೆ.ಎಸ್.ಆರ್.ಟಿ.ಸಿ. ಬಸ್ ಮೂಲಕ ಕರಾಯಕ್ಕೆ ಬಂದಿದ್ದರು. ಮಾ.24ಕ್ಕೆ ಜ್ವರದಿಂದ ಪುತ್ತೂರು ಆಸ್ಪತ್ರೆಗೆ ದಾಖಲಾಗಿದ್ದ ಇವರ ಗಂಟಲು ದ್ರವ ಪರೀಕ್ಷೆ ಮಾಡಿದಾಗ ಕೋವಿಡ್ ಸೋಂಕು ಪಾಸಿಟಿವ್ ಆಗಿರುವುದು ದೃಢಪಟ್ಟಿತ್ತು.

ಬಳಿಕ ಈ ಯುವಕನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಐಸೊಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆಗೊಳಪಡಿಸಲಾಗಿತ್ತು. ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈ ಯುವಕನ ಗಂಟಲು ದ್ರವ ಪರೀಕ್ಷೆ ನಡೆಸಿದಾಗ ಎರಡು ಬಾರಿಯೂ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಈತನನ್ನು ಇದೀಗ ಗುಣಮುಖಗೊಂಡಿದ್ದಾನೆ ಎಂದು ಘೋಷಿಸಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next