Advertisement

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

01:10 AM May 09, 2024 | Team Udayavani |

ಉಡುಪಿ: ಬಾವಿ ಸ್ವಚ್ಛ ಮಾಡಲು ಇಳಿದ ಇಬ್ಬರು ವ್ಯಕ್ತಿಗಳ ಪೈಕಿ ಓರ್ವ ಸಾವನ್ನಪ್ಪಿದರೆ ಮತ್ತೊಬ್ಬನನ್ನು ಅಗ್ನಿಶಾಮಕ ದಳದ ಸಿಬಂದಿ ರಕ್ಷಿಸಿದ ಘಟನೆ ಬುಧವಾರ ಸಂಜೆ ಬ್ರಹ್ಮಾವರ ಮಹಾಲಿಂಗೇಶ್ವರ ದೇವಸ್ಥಾನದ ಹಿಂಭಾಗದಲ್ಲಿರುವ ದೇವಾಡಿಗರ ಬೆಟ್ಟುವಿನಲ್ಲಿ ಸಂಭವಿಸಿದೆ.

Advertisement

ಸ್ಥಳೀಯ ನಿವಾಸಿ ದುರ್ಗೇಶ್ (34) ಸಾವನ್ನಪ್ಪಿದವರು. ಅಡಿವೆಪ್ಪ ಕುರಿ (50) ರಕ್ಷಣೆಗೊಳಗಾದವರು. ಇಬ್ಬರೂ ಕೊಪ್ಪಳ ಜಿಲ್ಲೆಯವರಾಗಿದ್ದು, ಬ್ರಹ್ಮಾವರದ ಸಾಲಿಕೆರೆಯಲ್ಲಿ ವಾಸಮಾಡಿಕೊಂಡು ಕೂಲಿ ಕೆಲಸ ಮಾಡುತ್ತಿದ್ದರು.

35 ಅಡಿ ಆಳದ ಬಾವಿ ಅದಾಗಿತ್ತು. ಕೆಸರು ಇದೆ ಎಂದು ಬಾವಿಯೊಳಗೆ ಬ್ಲೀಚಿಂಗ್‌ ಪೌಡರ್‌ಹಾಕಿ ಸ್ವಚ್ಛ ಮಾಡುತ್ತಿದ್ದರು. ಆಮ್ಲಜನಕ ಕೊರತೆ ಸಾವಿಗೆ ಕಾರಣ ಎನ್ನಲಾಗಿದೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next