Advertisement

ಅಪಘಾತದಲ್ಲಿ ಓರ್ವ ಸಾವು

06:03 AM May 20, 2020 | Lakshmi GovindaRaj |

ಎಚ್‌.ಡಿ.ಕೋಟೆ: ಬೈಕ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಬೈಕ್‌ ಸವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಮೂರು ಮಂದಿ ಪ್ರಥಮ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಸ್ಥಳಾಂತರಗೊಂಡ ಘಟನೆ ತಾಲೂಕಿನ  ಹೈರಿಗೆ ಬಳಿ ನಡೆದಿದೆ. ಮಾದಾಪುರದ ನಂಜುಂಡಸ್ವಾಮಿ(28) ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ವ್ಯಕ್ತಿ.

Advertisement

ಇನ್ನುಳಿದಂತೆ ಉದಯ್‌, ಮಯೂರ ಮತ್ತು ಮೀನಾಕ್ಷಮ್ಮ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ  ಪಡೆಯುತ್ತಿದ್ದಾರೆ. ನಂಜುಂಡಸ್ವಾಮಿ ಮಾದಾಪುರದಿಂದ ಎಚ್‌.ಡಿ.ಕೋಟೆ ಕಡೆಗೆ ತನ್ನ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಾಗ, ವಿರುದ ದಿಕ್ಕಿನಿಂದ ಬಂದ ಮತ್ತೂಂದು ಬೈಕ್‌ ಡಿಕ್ಕಿ ಹೊಡೆದಿದೆ. ತೀವ್ರ ಗಾಯಗಳಾಗಿದ್ದ 4 ಮಂದಿಯನ್ನು  ಸಾರ್ವಜನಿಕರು ಎಚ್‌ .ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಎಚ್‌.ಡಿ.ಕೋಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next