Advertisement

CMಕೇಜ್ರಿ ಪುತ್ರಿ ಕಿಡ್ನಾಪ್ ಮಾಡುವ ಬೆದರಿಕೆಯೊಡ್ಡಿದ್ದ ವ್ಯಕ್ತಿ ಸೆರೆ

08:23 AM Jan 15, 2019 | Team Udayavani |

ನವದೆಹಲಿ:ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪುತ್ರಿಯನ್ನು ಕಿಡ್ನಾಪ್ ಮಾಡುವುದಾಗಿ ಅನಾಮಿಕ ಇ ಮೇಲ್ ಮೂಲಕ ಬೆದರಿಕೆಯೊಡ್ಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸೈಬರ್ ಸೆಲ್ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.

Advertisement

ಬಂಧಿತ ವ್ಯಕ್ತಿಯನ್ನು ವಿಕಾಸ್ ಎಂದು ಗುರುತಿಸಲಾಗಿದ್ದು, ಮಂಗಳವಾರ ವಶಕ್ಕೆ ಪಡೆಯಲಾಗಿದೆ ಎಂದು ಖಾಸಗಿ ನ್ಯೂಸ್ ಚಾನೆಲ್ ವೊಂದರ ವರದಿ ವಿವರಿಸಿದೆ.

ಐಪಿ ವಿಳಾಸವನ್ನು ಪತ್ತೆ ಹಚ್ಚಿದ ಪೊಲೀಸರು ಆರೋಪಿಯನ್ನು ಬಿಹಾರದ ಮೋತಿಹರಿ ಸ್ಪೆಷಲ್ ಸೆಲ್ ಪೊಲೀಸರು ಪತ್ತೆ ಹಚ್ಚಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬೆದರಿಕೆ ಇ ಮೇಲ್ ಕುರಿತಂತೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

2019ರ ಜನವರಿ 9ರಂದು ದೆಹಲಿ ಮುಖ್ಯಮಂತ್ರಿ ಕಚೇರಿಗೆ ಅನಾಮಿಕ ಇ ಮೇಲ್ ಖಾತೆಯಿಂದ ಸಿಎಂ ಕೇಜ್ರಿವಾಲ್ ಪುತ್ರಿ ಹರ್ಷಿತಾ ಕೇಜ್ರಿವಾಲ್ ಅವರನ್ನು ಅಪಹರಿಸುವುದಾಗಿ ಬೆದರಿಕೆಯೊಡ್ಡಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ದೆಹಲಿ ಪೊಲೀಸರು ಸೈಬರ್ ಸೆಲ್ ಗೆ ವರ್ಗಾಯಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next