Advertisement

ಯುವಕನ ಕುಟುಂಬಕ್ಕೆ ಒಂದು ಲಕ್ಷ ರೂ. ನೆರವು

11:05 AM Oct 18, 2021 | Team Udayavani |

ಸೇಡಂ: ಮುಧೋಳ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಕುಟುಂಬಕ್ಕೆ ವೈಯಕ್ತಿಕವಾಗಿ ಒಂದು ಲಕ್ಷ ರೂ. ನೆರವು ನೀಡುತ್ತೇನೆ ಎಂದು ಜೆಡಿಎಸ್‌ ಮುಖಂಡ ಬಾಲರಾಜ ಗುತ್ತೇದಾರ ತಿಳಿಸಿದ್ದಾರೆ.

Advertisement

ಈ ಕುರಿತು ಪ್ರಕಟಣೆ ನೀಡಿರುವ ಅವರು, ಪ್ರಕರಣದಲ್ಲಿ ಗಾಯಗೊಂಡಿರುವ ಯುವಕನನ್ನು ಬದುಕಿಸಲು ಸಾಧ್ಯವಾದ ಮಟ್ಟಿಗೆ ಪ್ರಯತ್ನಿಸುತ್ತೇನೆ. ವೈದ್ಯರಿಂದ ಮಾಹಿತಿಯನ್ನು ಪಡೆದಿದ್ದೇನೆ. ಅಲ್ಲದೇ ಈ ವಿಷಯದಲ್ಲಿ ರಾಜಕೀಯ ಮಾಡುವುದನ್ನು ಬಿಟ್ಟು ಬಿಜೆಪಿ, ಕಾಂಗ್ರೆಸ್‌ ಪಕ್ಷದ ಮುಖಂಡರು ನೆರವಿಗೆ ಬರಬೇಕು ಎಂದು ಕೋರಿದ್ದಾರೆ.

ಮಾಜಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಹಾಗೂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯುವಕನ ಹೆಸರಲ್ಲಿ ಹೋರಾಟ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ಪಕ್ಷದ ಮುಖಂಡರು ಮುಧೋಳ ಪಿಐ ಆನಂದರಾವ್‌ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ ಮಾಡಿದ್ದರೇ, ಬಿಜೆಪಿ ಮುಖಂಡರು ಅಮಾನತು ಹಿಂದಕ್ಕೆ ಪಡೆಯುವಂತೆ ಪ್ರತಿಭಟಿಸಿದ್ದಾರೆ. ಆದರೆ ಪಕ್ಷ ಬೇಧ ಮರೆತು ಘಟನೆಗೆ ಕಾರಣವಾದ ಎರಡೂ ಸಮುದಾಯದವರನ್ನು ಕರೆದು ಸಮಾಧಾನ ಮಾಡುವ ಕೆಲಸವನ್ನು ಯಾರೂ ಮಾಡಿಲ್ಲ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವಕನ ಕುಟುಂಬಕ್ಕೆ ಧೈರ್ಯ ತುಂಬಿ, ಧನ ಸಹಾಯ ಮಾಡಲು ಮುಂದೆ ಬಂದಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next