Advertisement

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

08:57 PM Mar 29, 2024 | Team Udayavani |

ಉಡುಪಿ: ಕೊರಂಗ್ರಪಾಡಿ ಜಂಕ್ಷನ್‌ನ ತಿರುವಿನಲ್ಲಿ ಮಾ. 29ರ ಮುಂಜಾನೆ ಸ್ಕೂಟರ್‌ ಮತ್ತು ಕಾರಿನ ನಡುವೆ ಢಿಕ್ಕಿ ಸಂಭವಿಸಿದ್ದು, ಗಂಭೀರ ಗಾಯಗೊಂಡ ಸ್ಕೂಟರ್‌ ಸವಾರ ಮೃತಪಟ್ಟಿದ್ದಾರೆ.

Advertisement

ಕೊರಂಗ್ರಪಾಡಿ ನಿವಾಸಿ ವಿಕ್ರಮ್‌ (29) ಮೃತಪಟ್ಟ ವ್ಯಕ್ತಿ. ಫ್ಯಾಬ್ರಿಕೇಷನ್‌ ಕೆಲಸ ಮಾಡುತ್ತಿದ್ದ ವಿಕ್ರಮ್‌ ಅವರು ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುವಾಗ ಜಂಕ್ಷನ್‌ನ ತಿರುವಿನಲ್ಲಿ ಎದುರಿನಿಂದ ಬಂದ ಕಾರು ಸ್ಕೂಟರ್‌ಗೆ ಢಿಕ್ಕಿ ಹೊಡೆದಿದೆ. ತಲೆ ಮತ್ತು ಕಾಲಿಗೆ ಗಾಯವಾಗಿದ್ದ ವಿಕ್ರಮ್‌ ಅವರನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದು, ಅಷ್ಟರಲ್ಲಿ ವಿಕ್ರಮ್‌ ಮೃತಪಟ್ಟಿರುವ ಬಗ್ಗೆ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next