Advertisement

ಮಹಾರಾಷ್ಟ್ರದಿಂದ ಮರಳಿದ್ದ ಬೆಳ್ತಂಗಡಿಯ ಯುವತಿಗೆ ಸೋಂಕು ದೃಢ

01:39 PM May 22, 2020 | keerthan |

ಮಂಗಳೂರು: ಮಹಾರಾಷ್ಟ್ರದಿಂದ ಆಗಮಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಯುವತಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಶುಕ್ರವಾರದ ವರದಿಯಲ್ಲಿ ಜಿಲ್ಲೆಯಲ್ಲಿ ಏಕೈಕ ಸೋಂಕು ಪ್ರಕರಣ ವರದಿಯಾಗಿದೆ.

Advertisement

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಆರಂಬೋಡಿಯ 29 ವರ್ಷದ ಯುವತಿಗೆ ಸೋಂಕು ತಾಗಿರುವುದು ದೃಢವಾಗಿದೆ. ಈಕೆ ಕಳೆದ 18ರಂದು ಮಹಾರಾಷ್ಟ್ರ ರಾಜ್ಯದ ದೊಂಬಿವಿಲಿ, ಥಾಣೆ, ಮುಂಬೈನಿಂದ ಪ್ರಯಾಣ ಬೆಳೆಸಿದ್ದರು. ಇವರನ್ನು ಬೆಳ್ತಂಗಡಿಯಲ್ಲಿ ಜಿಲ್ಲಾಡಳಿತದ ವತಿಯಿಂದ ಸ್ಥಾಪಿಸಲಾದ ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ರಾಜ್ಯದಲ್ಲಿ ಇಂದು ಒಟ್ಟು 105 ಹೊಸ ಕೋವಿಡ್-19 ಸೋಂಕು ಪ್ರಕರಣಗಳು ದೃಢವಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1710ಕ್ಕೆ ಏರಿಕೆಯಾಗಿದೆ. ಇದರಲ್ಲಿ 588 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 41 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಓರ್ವ ಸೋಂಕಿತ ಕೋವಿಡ್ ಅಲ್ಲದ ಕಾರಣದಿಂದ ಮರಣ ಹೊಂದಿದ್ದಾನೆ.

Advertisement

Udayavani is now on Telegram. Click here to join our channel and stay updated with the latest news.

Next