Advertisement

ದೇಶಕ್ಕೊಂದೇ ಚುನಾವಣೆ ಬಗ್ಗೆ ಚರ್ಚೆ

01:29 AM Jul 04, 2019 | Team Udayavani |

ನವದೆಹಲಿ: ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ದೇಶಕ್ಕೊಂದೇ ಚುನಾವಣೆ ಯೋಜನೆ ಬಗ್ಗೆ ರಾಜ್ಯಸಭೆಯಲ್ಲಿ ಸಮಗ್ರ ಚರ್ಚೆ ನಡೆಯಿತು. ಕೇಂದ್ರ ಸರ್ಕಾರವು ಚುನಾವಣಾ ಆಯೋಗದ ಕಾರ್ಯಕಲಾಪದಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಎಂದು ಟಿಎಂಸಿ ಸದಸ್ಯ ಡೆರೆಕ್‌ ಓಬ್ರಿಯಾನ್‌ ಆರೋಪಿಸಿದ್ದಾರೆ. ಅಲ್ಲದೆ,ಲೋಕಸಭೆ ಚುನಾವಣೆಯ ವೇಳೆ ಪಶ್ಚಿಮ ಬಂಗಾಳದಲ್ಲಿ ನಿಗದಿಗಿಂತ 24 ಗಂಟೆ ಮೊದಲೇ ಪ್ರಚಾರವನ್ನು ಸ್ಥಗಿತಗೊಳಿಸಿದ್ದಕ್ಕೆ ತರಾಟೆಗೆ ತೆಗೆದುಕೊಂಡರು. ಕಾಂಗ್ರೆಸ್‌ ಮುಖಂಡ ಕಪಿಲ್ ಸಿಬಲ್, ಈ ಬಾರಿಯ ಚುನಾವಣೆಯಲ್ಲಿ ಸಾಮಾಜಿಕ ಮಾಧ್ಯಮ ದುರ್ಬಳಕೆಯಾಗಿದೆ. ಮತದಾರರನ್ನು ಟಾರ್ಗೆಟ್ ಮಾಡಲು ಫೇಸ್‌ಬುಕ್‌ ಮತ್ತು ಗೂಗಲ್ ಬಳಕೆಯ ಬಗ್ಗೆ ತನಿಖೆ ನಡೆಸಬೇಕು ಎಂದು ಸಿಬಲ್ ಆಗ್ರಹಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next