Advertisement

ಕಾಶ್ಮೀರದಲ್ಲಿ ಮುಂದುವರಿದ ಸೇನಾ ಕಾರ್ಯಾಚರಣೆ: ಓರ್ವ ಉಗ್ರನ ಹತ್ಯೆ

04:49 AM Mar 07, 2019 | |

ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರನ್ನು ಹತ್ತಿಕ್ಕಲು ಸೇನಾ ಕಾರ್ಯಾಚರಣೆ ಮುಂದುವರಿದಿದ್ದು, ಗುರುವಾರ ಮುಂಜಾನೆ ಹಂದ್ವಾರ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಭಾರತೀಯ ಸೇನೆ ಓರ್ವ ಉಗ್ರನನ್ನು ಹೊಡೆದುರುಳಿಸಿದೆ.

Advertisement

ಹಂದ್ವಾರ ಜಿಲ್ಲೆಯ ಕ್ರಾಲ್ಗುಂದ್ ಎಂಬಲ್ಲಿ ಈ ಎನ್ ಕೌಂಟರ್ ನಡೆದಿದೆ. ಉಗ್ರನೊಬ್ಬ ಈ ಸ್ಥಳದಲ್ಲಿ ಅಡಗಿರುವ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಸೇನೆ ಈ ಕಾರ್ಯಾಚರಣೆ ನಡೆಸಿತು. ಉಗ್ರ ಅಡಗಿದ್ದ ಸ್ಥಳವನ್ನು ಸುತ್ತುವರಿದು ದಾಳಿ ನಡೆಸಿದ ಭಾರತೀಯ ಸೇನೆ ಓರ್ವ ಉಗ್ರನನ್ನು ಹೊಡೆದುರುಳಿಸುವಲ್ಲಿ ಸಫಲವಾಗಿದೆ. 

ಕಾರ್ಯಾಚರಣೆ ನಡೆಸಿದ ಸ್ಥಳದಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಕಳೆದ ಫೆಬ್ರವರಿ 14ರಂದು ಪುಲ್ವಾಮಾದಲ್ಲಿ ಸಿಆರ್ ಪಿಎಫ್ ಯೋಧರ ಮೇಲೆ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತೀಯ ಸೇನೆ ಕಾಶ್ಮೀರದಲ್ಲಿ ಅಡಗಿರುವ ಉಗ್ರರನ್ನು ಹುಡುಕಿ ಹೆಡೆಮುರಿ ಕಟ್ಟುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next