Advertisement
ರಾಜಕೀಯ ಪಕ್ಷಗಳು ಭಿನ್ನಾಭಿಪ್ರಾಯ ಮರೆತು, ದೇಶದ ಭದ್ರತೆಗೆ ಸೇನೆಯ ತ್ಯಾಗ ಮತ್ತು ಬಲಿದಾನಗಳನ್ನು ಕೊಂಡಾಡಿವೆ. ಕೃತ್ಯವನ್ನು ಖಂಡಿಸಿ ಸಭೆಯಲ್ಲಿ ನಿಲುವಳಿ ಮಂಡಿಸಲಾಗಿದ್ದು, ಗಡಿಯಲ್ಲಿ ಉಗ್ರಗಾಮಿ ಚಟುವಟಿಕೆಯನ್ನು ನಿರ್ಮೂಲನೆ ಮಾಡುವ ಶಪಥ ಮಾಡಲಾಗಿದೆ. ಆದರೆ ನಿಲುವಳಿಯಲ್ಲಿ ಪಾಕಿಸ್ಥಾನದ ಹೆಸರನ್ನು ಎಲ್ಲಿಯೂ ಉಲ್ಲೇಖೀಸಿಲ್ಲ.
ದಕ್ಷಿಣ ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ದಾಳಿ ಹಾಗೂ ಸರಕಾರ ಅನಂತರ ಕೈಗೊಂಡ ಕ್ರಮಗಳನ್ನು ಪಕ್ಷಗಳಿಗೆ ಈ ವೇಳೆ ವಿವರಿಸಲಾಗಿದೆ. ಗಡಿಯಲ್ಲಿ ಬಾಂಬ್ ಸ್ಫೋಟ: ಸೇನಾಧಿಕಾರಿ ಹುತಾತ್ಮ
ಜಮ್ಮು: ಶನಿವಾರ ಮತ್ತೆ ಗಡಿಯಲ್ಲಿ ಬಾಂಬ್ ಸ್ಫೋಟ ನಡೆಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಸುಧಾರಿತ ಸ್ಫೋಟಕಗಳನ್ನು ಬಳಸಿ ಸ್ಫೋಟ ನಡೆಸಿದ್ದು, ಈ ದಾಳಿಯಲ್ಲಿ ಸೇನಾಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ. ದಾಳಿಯಲ್ಲಿ ಯೋಧರೊಬ್ಬರು ಗಾಯಗೊಂಡಿದ್ದಾರೆ. ಇದೇ ವೇಳೆ, ರಜೌರಿಯ ನೌಶೆರಾ ವಲಯದಲ್ಲಿ ಪಾಕ್ ಪಡೆ ಕದನ ವಿರಾಮ ಉಲ್ಲಂ ಸಿ, ಗುಂಡಿನ ದಾಳಿ ನಡೆಸಿದ ಪರಿಣಾಮ ಯೋಧರೊಬ್ಬರು ಗಾಯಗೊಂಡಿದ್ದಾರೆ. ನಮ್ಮ ಸೇನೆಯೂ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಸೇನೆ ತಿಳಿಸಿದೆ.