Advertisement

ಬೀದಿ ವ್ಯಾಪಾರಿಗಳಿಗೂ ಆನ್‌ಲೈನ್‌ ಮಾರಾಟ ವ್ಯವಸ್ಥೆ

01:43 AM Sep 10, 2020 | mahesh |

ಹೊಸದಿಲ್ಲಿ: ಬಯಸುವ ತಿನಿಸುಗಳನ್ನು ಬೃಹತ್‌ ರೆಸ್ಟೋರೆಂಟ್‌ಗಳಿಂದಷ್ಟೇ ಆನ್‌ಲೈನ್‌ ಮೂಲಕ ತರಿಸಿಕೊಳ್ಳುತ್ತಿದ್ದ ನೀವು ಇನ್ನು ಮುಂದೆ ನಿಮ್ಮ ಪರಿಸರದ ಬೀದಿ ಬದಿಯ ವ್ಯಾಪಾರಸ್ಥರಿಂದಲೂ ಮನೆ ಬಾಗಿಲಿಗೇ ತರಿಸಿಕೊಳ್ಳಬಹುದು. ಈ ಬಗ್ಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಬುಧವಾರ ಪ್ರಕಟಿಸಿದ್ದಾರೆ.

Advertisement

ಪ್ರಧಾನಮಂತ್ರಿ ಬೀದಿ ಬದಿಯ ವ್ಯಾಪಾರಿಗಳ ಆತ್ಮನಿರ್ಭರ ನಿಧಿ (ಪಿಎಂಎಸ್‌ವಿಎ ನಿಧಿ) ಯೋಜನೆಯ ಫ‌ಲಾನುಭವಿಗಳ ಜತೆಗೆ ಆನ್‌ಲೈನ್‌ ಮೂಲಕ ಸಂವಾದ ನಡೆಸಿದ ಸಂದರ್ಭದಲ್ಲಿ ಮೋದಿ ಈ ವಿಚಾರ ತಿಳಿಸಿದ್ದಾರೆ. ಮಧ್ಯಪ್ರದೇಶದಲ್ಲಿ ಈ ಯೋಜನೆ ಸಮರ್ಪಕವಾಗಿ ಜಾರಿಯಾಗಿದ್ದು, ಒಂದು ಲಕ್ಷ ಮಂದಿ ಸದುಪಯೋಗ ಪಡೆದು ಕೊಂಡಿದ್ದಾರೆ, ಇದೊಂದು ಶ್ಲಾಘನೀಯ ಬೆಳವಣಿಗೆ ಎಂದು ಹೇಳಿದ್ದಾರೆ. ಎರಡು ತಿಂಗಳ ಅವಧಿಯಲ್ಲಿ 4.5 ಲಕ್ಷ ಮಂದಿಗೆ ಯೋಜನೆಯ ಅನ್ವಯ ಗುರುತಿನ ಚೀಟಿ ವಿತರಿಸಿರುವುದು ಅತ್ಯುತ್ತ ಮ ಬೆಳವಣಿಗೆಯಾಗಿದೆ ಎಂದರು.ಡಿಜಿಟಲ್‌ ಪಾವತಿ ನಿಟ್ಟಿನಲ್ಲಿ ಬ್ಯಾಂಕ್‌ಗಳು ಆಧುನಿಕ ವ್ಯವಸ್ಥೆ ಗಳನ್ನು ಆರಂಭಿಸಿವೆ. ಅದನ್ನು ಬೀದಿ ಬದಿಯ ವ್ಯಾಪಾರಿಗಳು ಅಳವಡಿಸಿಕೊಳ್ಳಬೇಕು ಎಂದರು.

ದೇಶದಲ್ಲಿ ಬಡತನ ನಿರ್ಮೂಲನೆ ಬಗ್ಗೆ ಕೈಗೊಂಡ ಕ್ರಮಗಳ ಬಗ್ಗೆ ಪ್ರಸ್ತಾವಿಸಿದ ಮೋದಿ, ದೇಶದಲ್ಲಿ ಬಡತನ ನಿರ್ಮೂಲನೆ ಬಗ್ಗೆ ಹಿಂದಿನ ಹಲವು ಸಂದರ್ಭಗಳಲ್ಲಿ ಪ್ರಸ್ತಾವಿಸಲಾಗಿತ್ತು. ಆದರೆ ಹಿಂದಿನ ಆರು ವರ್ಷಗಳಲ್ಲಿ ಬಡತನ ನಿರ್ಮೂಲನೆ ನಿಟ್ಟಿನಲ್ಲಿ ಯೋಜನಾಬದ್ಧವಾಗಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಇಂದು ಮತ್ಸತ್ಸ್ಯಸಂಪದ ಬಿಡುಗಡೆ
ಆತ್ಮನಿರ್ಭರ ಭಾರತ ಯೋಜನೆಯಡಿ ಕೇಂದ್ರ ಸರಕಾರ ಹಲವು ಯೋಜನೆಗಳನ್ನು ಘೋಷಿಸಿದ್ದು, ಅದರಂಗವಾಗಿ ತಯಾರಾಗಿರುವ ಪ್ರಧಾನಮಂತ್ರಿ ಮತ್ಸ éಸಂಪದ ಯೋಜನೆ(ಪಿಎಂಎಸ್‌ಎಸ್‌ವೈ)ಯನ್ನು ಗುರುವಾರ ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಜತೆಗೆ ಕೃಷಿಕರ ನೆರವಿಗಾಗಿ ಇ-ಗೋಪಾಲ ಆ್ಯಪ್‌ ಅನ್ನೂ ಬಿಡುಗಡೆ ಮಾಡಲಿದ್ದಾರೆ. ಮೀನುಗಾರಿಕೆ ವಲಯ ಅಭಿವೃದ್ಧಿ ಗೆ 20,050 ಕೋಟಿ ರೂ. ತೊಡಗಿಸಲಾಗುತ್ತಿದೆ. 2020-21ರಿಂದ 2024-25ರ ವರೆಗಿನ 5 ವರ್ಷಗಳಲ್ಲಿ ಎಲ್ಲ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ ಮೀನುಗಾರಿಕೆ ಅಭಿವೃದ್ಧಿ ಗುರಿ ಹೊಂದಲಾಗಿದೆ. 12,340 ಕೋಟಿ ರೂ.ಗಳನ್ನು ಸಮುದ್ರ, ಒಳನಾಡು ಮೀನುಗಾರಿಕೆ ಮತ್ತು ಮೀನುಸಾಕಾಣಿಕೆ ಮಾಡುವವರಿಗೆ ಬಳಸಲಾಗುತ್ತದೆ. ಮೀನುಗಾರಿಕೆ ಸಂಬಂಧಿ ಮೂಲಸೌಕರ್ಯಗಳಿಗಾಗಿ ಬಾಕಿ 7,710 ಕೋಟಿ ರೂ. ಬಳಸಲಾಗುತ್ತದೆ.

Advertisement

Udayavani is now on Telegram. Click here to join our channel and stay updated with the latest news.

Next