Advertisement

ನೆಹರೂ ಹೊಗಳಿದರೆ ಮಾತ್ರ ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ: ಸಚಿವ ಬಿ.ಸಿ.ಪಾಟೀಲ 

08:55 PM Aug 13, 2021 | Team Udayavani |

ಹಿರೇಕೆರೂರು: ಡಿ.ಕೆ.ಶಿವಕುಮಾರ ಅವರು ನೆಹರೂ ಕುಟುಂಬ ಹೊಗಳಿದರೆ ಮಾತ್ರ ಕೆಪಿಸಿಸಿ ಅಧ್ಯಕ್ಷರಾಗಿರುತ್ತಾರೆ. ಇಲ್ಲದಿದ್ದರೆ ಅವರನ್ನು ಕಿತ್ತು ಬಿಸಾಕುತ್ತಾರೆ. ಹಾಗಾಗಿ, ಅವರು ನೆಹರೂ ಕುಟುಂಬ ಹೊಗಳುತ್ತಿದ್ದಾರೆಂದು ಕೃಷಿ ಸಚಿವ ಬಿ.ಸಿ.ಪಾಟೀಲ ಲೇವಡಿ ಮಾಡಿದರು.

Advertisement

ತಾಲೂಕಿನ ಬಸರೀಹಳ್ಳಿ ಗ್ರಾಮದ ಬಳಿಯ ಹೆಲಿಪ್ಯಾಡ್‌ನ‌ಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ದೇಶದಲ್ಲಿ ಹುಟ್ಟಿದ ಪ್ರತಿಯೊಬ್ಬ ಮನುಷ್ಯನ ತ್ಯಾಗದಿಂದ ದೇಶಕ್ಕೆ ಸ್ವಾತಂತ್ರ್ಯಬಂದಿದೆ. ಸ್ವಾತಂತ್ರ್ಯಪಡೆಯುವ ಸಂದರ್ಭದಲ್ಲಿ ಯಾವುದೇ ಪಕ್ಷ, ಪಂಗಡಗಳು, ರಾಜಕೀಯ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಇರಲಿಲ್ಲ. ಇಂಗ್ಲಿಷರ ಆಡಳಿತಕ್ಕೆ ಒಳಪಟ್ಟ ಸಂದರ್ಭದಲ್ಲಿ ಪ್ರತಿಯೊಬ್ಬ ಪ್ರಜೆ ದೇಶಕ್ಕೆ ಸ್ವಾತಂತ್ರ್ಯಬರಬೇಕೆಂದು ಹೋರಾಟ ಮಾಡಿದ್ದಾನೆ. ಅದರಲ್ಲಿ ನೆಹರು ದೊಡ್ಡವರಾಗಿ ಪ್ರಧಾನ ಮಂತ್ರಿಗಳಾದರಷ್ಟೇ ಎಂದರು.

ಇದನ್ನೂ ಓದಿ:ಮೇಕೆದಾಟು ಯೋಜನೆ ಬಗ್ಗೆ ಸಿಎಂ ನಿಲುವು ಸ್ಪಷ್ಟಪಡಿಸಬೇಕು: ಸಿದ್ದರಾಮಯ್ಯ ಒತ್ತಾಯ

ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಗಳಾಗಿ ಹದಿನೈದು ದಿನಗಳಾಗಿವೆ. ಎಲ್ಲ ಕಡೆಗಳಲ್ಲಿ ಪ್ರವಾಸ ಮಾಡಿ ಕೋವಿಡ್‌ ಸಂಬಂಧ ಸಭೆ ಮಾಡುತ್ತಿದ್ದಾರೆ. ಹಗಲಿರುಳು ಶ್ರಮಿಸುತ್ತಿದ್ದಾರೆ.ಮುಂದಿನ ದಿನಗಳಲ್ಲಿ ಉತ್ತಮ ಆಡಳಿತವನ್ನು ನಾವು ನಿರೀಕ್ಷೆ ಮಾಡಿದ್ದೇವೆ.

ವಿಜಯೇಂದ್ರ ಮತ್ತು ಮಾಜಿ ಸಿಎಂ ಯಡಿಯೂರಪ್ಪ ಕುರಿತು ಶಾಸಕ ಯತ್ನಾಳ ಹೇಳಿಕೆ ವೈಯಕ್ತಿಕವಾದುದು. ಬಿಎಸ್‌ವೈ ಬಗ್ಗೆಯಾಗಲಿ, ವಿಜಯೇಂದ್ರ ಬಗ್ಗೆಯಾಗಲಿ ಪಕ್ಷದಲ್ಲಿ ಯಾವುದೇ ಅಸಮಾಧಾನ, ಅಸಹಕಾರ ಇಲ್ಲ. ಬಿಎಸ್‌ವೈ ನಮ್ಮ ಪಕ್ಷದ ನಾಯಕರು. ವಿಜಯೇಂದ್ರ ನಮ್ಮ ಪಕ್ಷದ ರಾಜ್ಯ ಉಪಾಧ್ಯಕ್ಷರು. ಶಾಸಕ ಸ್ಥಾನಕ್ಕೆ ಆನಂದಸಿಂಗ್‌ ರಾಜೀನಾಮೆ ಕೊಡುವುದಿಲ್ಲ. ನಾನು ಕೂಡ ಅವರ ಜತೆ ಮಾತನಾಡಿದ್ದೇನೆ. ಸ್ವಲ್ಪ ಅಸಮಾಧಾನ ಇತ್ತು. ಎಲ್ಲವೂ ಸರಿಯಾಗುತ್ತದೆ ಎಂದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next