Advertisement

ಬಿಜೆಪಿಯಿಂದ ಮಾತ್ರ ತಾಂಡಾ ಅಭಿವದ್ಧಿ

05:48 PM Oct 16, 2021 | Shwetha M |

ಸಿಂದಗಿ: ಬಿಜೆಪಿ ಸರಕಾರವಿದ್ದಾಗ ಮಾತ್ರ ತಾಂಡಾ ಅಭಿವೃದ್ಧಿ ಸಾಧ್ಯ. ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದಾಗ ತಾಂಡಾ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದಾರೆ. ಸರ್ಕಾರದ ಯೋಜನೆಗಳು ಸಮಾಜಕ್ಕೆ ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ತಾಂಡಾ ನಿಗಮ ಕಾರ್ಯ ಪ್ರವೃತ್ತವಾಗಿದೆ ಎಂದು ಕುಡಚಿ ಶಾಸಕ ಪಿ.ರಾಜೀವ್ ಹೇಳಿದರು.

Advertisement

ಶುಕ್ರವಾರ ಗಬಸಾವಳಗಿ ತಾಂಡಾದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಪರ ಮತಯಾಚನೆ ಮಾಡಿ ಅವರು ಮಾತನಾಡಿರು.

ತಾಂಡಾ ಅಭಿವೃದ್ಧಿ ನಿಗಮದಿಂದ ಸಮಾಜ ಸಣ್ಣ ನೆಲೆ ಕಂಡುಕೊಂಡಿದೆ. ತಮ್ಮ ಅಧಿಕಾರದ ಅವಧಿಯಲ್ಲಿ ನಮ್ಮ ಸಮಾಜದ ಅಭಿವೃದ್ಧಿಗೆ ಶ್ರಮಿಸಿದ ರಮೇಶ ಭೂಸನೂರ ಅವರಿಗೆ ಮತ ನೀಡುವ ಮೂಲಕ ಜಯದ ಮಾಲೆ ಹಾಕೋಣ ಎಂದು ಹೇಳಿದರು.

ಡಾ| ಅನಿಲ ನಾಯಕ ಮಾತನಾಡಿ, ರಮೇಶ ಭೂಸನೂರ ಕೊರೊನಾ ಸಂಕಷ್ಟದಲ್ಲಿ ಆಹಾರ ಧಾನ್ಯ ಕಿಟ್‌ ವಿತರಿಸುವ ಜೊತೆಗೆ ಉಚಿತವಾಗಿ ಆಂಬ್ಯುಲೆನ್ಸ್‌ ಸೌಲಭ್ಯ ಮಾಡಿ ಜನತೆ ಸೇವೆ ಮಾಡಿದ್ದಾರೆ. ಆದ್ದರಿಂದ ಈ ಉಪಚುನಾವಣೆಯಲ್ಲಿ ರಮೇಶ ಭೂಸನೂರ ಅವರನ್ನು ಆಶೀರ್ವದಿಸಿ ಚುನಾಯಿಸಿ ಪುನಃ ಶಾಸಕರನ್ನಾಗಿ ಆಯ್ಕೆ ಮಾಡೋಣ ಎಂದು ಮನವಿ ಮಾಡಿಕೊಂಡರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next