Advertisement

ಮುಂದಿನ ಏಪ್ರಿಲ್‌ವರೆಗೆ ಮಾತ್ರ ಕೃಷ್ಣೆ ನೀರು

09:09 AM Jan 30, 2018 | |

ಬೆಳಗಾವಿ: ಕೃಷ್ಣಾ ನದಿಯಲ್ಲಿ ಏಪ್ರಿಲ್‌ ಅಂತ್ಯದ ವೇಳೆಗೆ ನೀರು ಖಾಲಿಯಾಗುವ ಸಾಧ್ಯತೆ ಇದೆ ಹೀಗಾಗಿ ಶಾಸಕರ ಸಭೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಕಳೆದ ಸಲದಂತೆ ವಾರದಲ್ಲಿ ಒಂದು ದಿನ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಪೂರೈಕೆ ಸ್ಥಗಿತ ಮಾಡುವ ಚಿಂತನೆ ಇದೆ. ಇದರಿಂದ ಮುಂದಿನ 20 ದಿನಗಳ ಕಾಲ ಪರಿಸ್ಥಿತಿ ನಿಭಾಯಿಸಬಹುದು.

Advertisement

ಅಗತ್ಯಬಿದ್ದರೆ ಮಹಾರಾಷ್ಟ್ರಕ್ಕೆ ಶಾಸಕರ ನಿಯೋಗ ತೆಗೆದುಕೊಂಡು ಹೋಗಲಾಗುವುದು ಎಂದರು. ಕೃಷಿ ಪಂಪ್‌ಸೆಟ್‌ಗಳಿಗೆ
ವಾರದಲ್ಲಿ ಒಮ್ಮೆ ವಿದ್ಯುತ್‌ ಸಂಪರ್ಕ ಮಾಡುವ ಸಂಬಂಧ ನೆರೆಯ ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ಶಾಸಕರ ಜೊತೆ ಮಾತುಕತೆ ನಡೆಸಿ ಸಭೆ ನಡೆಸಲು ಶಾಸಕರು ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಶಾಸಕರ ಸಭೆ ನಡೆಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next