Advertisement

ರೈತರ ಪ್ರತಿಭಟನೆ ನಿಲ್ಲಿಸಲು ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದೊಂದೇ ಮಾರ್ಗ : ಗಾಂಧಿ

07:50 PM Jun 09, 2021 | Team Udayavani |

ನವ ದೆಹಲಿ : ದೇಶದಲ್ಲಿ ಭಾರಿ ಪ್ರಮಾಣದಲ್ಲಿ ಸುದ್ದಿಯಾದ ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯ ವಿಚಾರ ಈಗ ಮತ್ತೆ ಮುನ್ನಲೆಗೆ ಬಂದಿದೆ.

Advertisement

ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೂರು ಕೇಂದ್ರ ಸರ್ಕಾರ ವಿವಾದಾತ್ಮಕ ಕೃಷಿ ಕಾನೂನುಗಳ ಬಗ್ಗೆ ಮತ್ತೆ ಧ್ವನಿ ಎತ್ತಿದ್ದು, ರೈತರ ಪ್ರತಿಭಟನೆಯನ್ನು ನಿಲ್ಲಿಸಲು ಇರುವ ಒಂದೇ ಒಂದು ಮಾರ್ಗವೇನೆಂದರೇ, ವಿವಾದಿತ ಕೃಷಿ ಕಾನೂನುಗಳನ್ನು ಹಿಂಪಡೆಯುವುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ : ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಸರ್ಕಾರ ಮೊಂಡು ವಾದವನ್ನು ತ್ಯಜಿಸಿ ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಕಾಂಗ್ರೆಸ್ ಆಗ್ರಹಿಸಿದೆ.

‘ಕೃಷಿ ಭೂಮಿಯ ರಕ್ಷಣೆಗಾಗಿ 500ಕ್ಕೂ ಹೆಚ್ಚು ರೈತರು ಸಾವನ್ನಪಿದ್ದಾರೆ. ಆದರೆ, ಅವರು ಹೆದರುವುದಿಲ್ಲ ಎಂದು ಗಾಂಧಿ ಟ್ವೀಟ್ ನಲ್ಲಿ ಕಿಡಿ ಕಾರಿದ್ದಾರೆ.  ಮಾತ್ರವಲ್ಲದೇ, ಕಳೆದ ಆರು ತಿಂಗಳಿಂದ ನಿರಂತರವಾಗಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಅವರು ಬೆಂಬಲ ಸೂಚಿಸಿದ್ದಾರೆ.

Advertisement

ಇನ್ನು, ಈ ಬಗ್ಗೆ ಟ್ವೀಟರ್ ಖಾತೆಯ ಮೂಲಕ  ಆಕ್ರೋಶ  ವ್ಯಕ್ತಪಡಿಸಿದ  ಕಾಂಗ್ರೆಸ್ ನ ವಕ್ತಾರ ರಣದೀಪ್‌ ಸುರ್ಜೇವಾಲ , ‘ಪ್ರತಿಭಟನಾ ನಿರತ ರೈತರು ಭಿಕ್ಷೆ ಬೇಡುತ್ತಿಲ್ಲ. ಅವರ ಹಕ್ಕುಗಳನ್ನು ಕೇಳುತ್ತಿದ್ದಾರೆ. ಕೇಂದ್ರ ಸರ್ಕಾರ ಮೊಂಡುತನ ಬಿಟ್ಟು ರೈತರ ಬೇಡಿಕೆಗಳಿಗೆ ಸ್ಪಂದಿಸಬೇಕು ಎಂದು ಗುಡುಗಿದ್ದಾರೆ.


ಇದನ್ನೂ ಓದಿ :  ವಿದ್ಯುತ್ ಶುಲ್ಕ ಏರಿಕೆ ಮಾಡಿರುವ ಸರಕಾರಕ್ಕೆ ಜನರ ಕಾಳಜಿಯೇ ಇಲ್ಲ : ಈಶ್ವರ್ ಖಂಡ್ರೆ

Advertisement

Udayavani is now on Telegram. Click here to join our channel and stay updated with the latest news.

Next