Advertisement

ಸುಧಾಕರ್‌ ಮೇಲಿನ ಹಲ್ಲೆ: ಅರ್ಜಿ ಇತ್ಯರ್ಥ

11:14 PM Aug 28, 2019 | Team Udayavani |

ಬೆಂಗಳೂರು: ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್‌ ಅನರ್ಹ ಶಾಸಕ ಡಾ. ಕೆ. ಸುಧಾಕರ್‌ ಮೇಲೆ ವಿಧಾನಸೌಧದಲ್ಲಿ ಜು.10ರಂದು ನಡೆದ ಹಲ್ಲೆ ಪ್ರಕರಣದ ಬಗ್ಗೆ ಎಫ್ಐಆರ್‌ ದಾಖಲಿಸಿಕೊಳ್ಳಲಾಗಿದೆ ಎಂದು ರಾಜ್ಯ ಹೈಕೋರ್ಟ್‌ಗೆ ಬುಧವಾರ ಮಾಹಿತಿ ನೀಡಿದೆ. ಈ ಕುರಿತು ವಕೀಲ ಎನ್‌.ಪಿ. ಅಮೃತೇಶ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಎ.ಎಸ್‌. ಓಕ್‌ ಹಾಗೂ ನ್ಯಾ. ಮೊಹಮ್ಮದ್‌ ನವಾಜ್‌ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿತು.

Advertisement

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರಾದ ಎಸ್‌.ಎಸ್‌. ಮಹೇಂದ್ರ, ಪ್ರಕರಣಕ್ಕೆ ಸಂಬಂಧಿಸಿದಂತೆ ಆ.10ರಂದೇ ವಿಧಾನಸೌಧದ ಪೊಲೀಸರು ಎಫ್ಐಆರ್‌ ದಾಖಲಿಸಿ ಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಎಫ್ಐಆರ್‌ ಪ್ರತಿಯನ್ನು ಪೀಠಕ್ಕೆ ಸಲ್ಲಿಸಿದರು. ಅದನ್ನು ದಾಖಲಿಸಿಕೊಂಡ ನ್ಯಾಯಪೀಠ ಈಗಾಗಲೇ ಎಫ್ಐಆರ್‌ ದಾಖಲಿಸಿ ಕೊಂಡಿದ್ದು, ಅರ್ಜಿದಾರರ ಮನವಿ ಊರ್ಜಿತವಾಗುವುದಿಲ್ಲ ಎಂದು ಹೇಳಿ, ಅರ್ಜಿ ಇತ್ಯರ್ಥಪಡಿಸಿತು.

Advertisement

Udayavani is now on Telegram. Click here to join our channel and stay updated with the latest news.

Next