Advertisement

ಅಧಿವೇಶನದಲ್ಲಿ  ಒಂಟಿಗಾಲಲ್ಲಿ ನಿಲ್ಲುವಂತೆ ಮಾಡ್ತೇನೆ: ಬಿಎಸ್‌ವೈ

03:50 AM Mar 04, 2017 | Team Udayavani |

ಹಾವೇರಿ/ ಹುಬ್ಬಳ್ಳಿ: “ಇನ್ನು 15-20 ದಿನಗಳಲ್ಲಿ ಮುಖ್ಯಮಂತ್ರಿ ಹಾಗೂ ಅವರ ಸಂಪುಟದ ಸಚಿವರ ಜಾತಕವನ್ನು ಜಾಲಾಡಿ ಅವರ ಮಾನ ಹರಾಜು ಹಾಕುತ್ತೇನೆ. ಮುಂದಿನ ಅಧಿವೇಶನಲ್ಲಿ ಎಲ್ಲರೂ ಒಂಟಿಗಾಲಲ್ಲಿ ನಿಲ್ಲುವಂತೆ ಮಾಡುತ್ತೇನೆ. ನಾನು ಯಾವುದೇ ಬೆದರಿಕೆಗೆ ಜಗ್ಗಲ್ಲ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಗುಡುಗಿದರು.

Advertisement

ಹಾವೇರಿಯಲ್ಲಿ ಶುಕ್ರವಾರ ಬಿಜೆಪಿ ಬೂತ್‌ ಮಟ್ಟದ ಸಮಾವೇಶದಲ್ಲಿ ಮಾತನಾಡಿ, “ಡೈರಿಯಂತೆ ಸದ್ಯದಲ್ಲಿಯೇ ಇನ್ನೊಂದು ದೊಡ್ಡ ಬಾಂಬ್‌ ಸಿಡಿಸುತ್ತೇನೆ. ಬಿಬಿಎಂಪಿಯಲ್ಲಿ ಎಲ್ಲ ಖದೀಮರು ಸೇರಿ 3000 ಕೋಟಿಗೂ ಅಧಿಕ ಹಣ ಲೂಟಿ ಮಾಡಿದ್ದಾರೆ. ಅದನ್ನು ದಾಖಲೆ ಸಹಿತ ಬಿಡುಗಡೆ ಮಾಡುತ್ತೇನೆ’ ಎಂದು  ಹೇಳಿದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, “ಉಕ್ಕಿನ ಸೇತುವೆ ನಿರ್ಮಾಣವನ್ನು ಹಿಂಪಡೆದು ಕಾಂಗ್ರೆಸ್‌ ತನ್ನ ತಪ್ಪನ್ನು ಒಪ್ಪಿಕೊಂಡಿದೆ.  ಡೈರಿ ಪ್ರಕರಣ ಸುಳ್ಳಾದರೆ ನಾನು ರಾಜಕೀಯ ಸನ್ಯಾಸ ಸ್ವೀಕರಿಸುತ್ತೇನೆ ಇಲ್ಲವಾದರೆ ಸಿಎಂ ರಾಜೀನಾಮೆ ನೀಡುತ್ತಾರೆಯೇ?’ ಎಂದು ಸವಾಲು ಹಾಕಿದರು.
ಅಲ್ಲದೆ ಚೆಕ್‌ ಮುಖಾಂತರ ನಾನು ಪಕ್ಷದ ಹೈಕಮಾಂಡ್‌ಗೆ ಕಪ್ಪ ಸಲ್ಲಿಸಿರುವ ಬಗ್ಗೆ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಬಳಿ ದಾಖಲೆಗಳಿವೆ ಎಂದಿದ್ದಾರೆ. ಅವರು ಪ್ರಾಮಾಣಿಕರಾಗಿದ್ದರೆ ತಕ್ಷಣ ಅವುಗಳನ್ನು ಬಿಡುಗಡೆ ಮಾಡಲಿ ಎಂದು ಸವಾಲೆಸೆದರು.

ನಾಲ್ಕೈದು ತಿಂಗಳಲ್ಲಿ ಚುನಾವಣೆ
ರಾಜ್ಯದ ಮುಖ್ಯಮಂತ್ರಿ, ಸಚಿವರು ಪಕ್ಷದ ರಾಷ್ಟ್ರೀಯ ನಾಯಕರಿಗೆ ರಾಜ್ಯದ ಜನರ 600-700 ಕೋಟಿ ರೂ. ಕೊಟ್ಟಿದ್ದಾರೆ. ಇವೆಲ್ಲವೂ ಡೈರಿಯಲ್ಲಿ ಬಹಿರಂಗಗೊಂಡಿದೆ. ಸಿಬಿಐ ತನಿಖೆ ನಡೆದು ಈ ಕಳ್ಳರು ಸಿಕ್ಕಿಬಿದ್ದರೆ ನಾಲ್ಕೈದು ತಿಂಗಳಲ್ಲಿಯೇ ಚುನಾವಣೆ.
– ಬಿ.ಎಸ್‌. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ
 

Advertisement

Udayavani is now on Telegram. Click here to join our channel and stay updated with the latest news.

Next