Advertisement
ಹಾವೇರಿಯಲ್ಲಿ ಶುಕ್ರವಾರ ಬಿಜೆಪಿ ಬೂತ್ ಮಟ್ಟದ ಸಮಾವೇಶದಲ್ಲಿ ಮಾತನಾಡಿ, “ಡೈರಿಯಂತೆ ಸದ್ಯದಲ್ಲಿಯೇ ಇನ್ನೊಂದು ದೊಡ್ಡ ಬಾಂಬ್ ಸಿಡಿಸುತ್ತೇನೆ. ಬಿಬಿಎಂಪಿಯಲ್ಲಿ ಎಲ್ಲ ಖದೀಮರು ಸೇರಿ 3000 ಕೋಟಿಗೂ ಅಧಿಕ ಹಣ ಲೂಟಿ ಮಾಡಿದ್ದಾರೆ. ಅದನ್ನು ದಾಖಲೆ ಸಹಿತ ಬಿಡುಗಡೆ ಮಾಡುತ್ತೇನೆ’ ಎಂದು ಹೇಳಿದರು.
ಅಲ್ಲದೆ ಚೆಕ್ ಮುಖಾಂತರ ನಾನು ಪಕ್ಷದ ಹೈಕಮಾಂಡ್ಗೆ ಕಪ್ಪ ಸಲ್ಲಿಸಿರುವ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಬಳಿ ದಾಖಲೆಗಳಿವೆ ಎಂದಿದ್ದಾರೆ. ಅವರು ಪ್ರಾಮಾಣಿಕರಾಗಿದ್ದರೆ ತಕ್ಷಣ ಅವುಗಳನ್ನು ಬಿಡುಗಡೆ ಮಾಡಲಿ ಎಂದು ಸವಾಲೆಸೆದರು. ನಾಲ್ಕೈದು ತಿಂಗಳಲ್ಲಿ ಚುನಾವಣೆ
ರಾಜ್ಯದ ಮುಖ್ಯಮಂತ್ರಿ, ಸಚಿವರು ಪಕ್ಷದ ರಾಷ್ಟ್ರೀಯ ನಾಯಕರಿಗೆ ರಾಜ್ಯದ ಜನರ 600-700 ಕೋಟಿ ರೂ. ಕೊಟ್ಟಿದ್ದಾರೆ. ಇವೆಲ್ಲವೂ ಡೈರಿಯಲ್ಲಿ ಬಹಿರಂಗಗೊಂಡಿದೆ. ಸಿಬಿಐ ತನಿಖೆ ನಡೆದು ಈ ಕಳ್ಳರು ಸಿಕ್ಕಿಬಿದ್ದರೆ ನಾಲ್ಕೈದು ತಿಂಗಳಲ್ಲಿಯೇ ಚುನಾವಣೆ.
– ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ