Advertisement

ಇಂದಿರಾ ಕ್ಯಾಂಟೀನ್‌ ಉದ್ಘಾಟನೆ

06:02 AM May 12, 2020 | Suhan S |

ಯಲ್ಲಾಪುರ: ಬಹುದಿನಗಳಿಂದ ಉದ್ಘಾಟನೆಗೊಳ್ಳದೇ ನೆನೆಗುದಿಗೆ ಬಿದ್ದಿದ್ದ ಇಂದಿರಾ ಕ್ಯಾಂಟೀನ್‌ ಕೊನೆಗೂ ಸೋಮವಾರ ಉಸ್ತುವಾರಿ ಸಚಿವ ಶಿವರಾಮ ಹೆಬ್ಟಾರ್‌ ಉದ್ಘಾಟಿಸಿದರು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಕಾರಾಣಾಂತರಗಳಿಂದ ತಡವಾಗಿ ಉದ್ಘಾಟನೆಯಾಗಿದೆ. ಬಡವರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು. ತಹಶೀಲ್ದಾರ್‌ ಡಿ.ಜಿ.ಹೆಗಡೆ, ಪ.ಪಂ ಮುಖ್ಯಾ ಧಿಕಾರಿ ಅರುಣ ನಾಯ್ಕ,ಪ.ಪಂ ಸದಸ್ಯರು ಇದ್ದರು.

ಮುಂಡಗೋಡ: ಬಡ ಜನರಿಗೆ ಅನುಕೂಲವಾಗಲೆಂದು ಸರಕಾರ ಇಂದಿರಾ ಕ್ಯಾಂಟೀನ್‌ ಯೋಜನೆ ಜಾರಿಗೆ ತಂದಿದೆ ಎಂದು ಸಚಿವ ಶಿವರಾಮ ಹೆಬ್ಟಾರ ಹೇಳಿದರು.

ಪಪಂ ಮುಂಭಾಗದಲ್ಲಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್‌ ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್‌. ಪಾಟೀಲ, ಜಿಪಂ ಸದಸ್ಯ ಎಲ್‌.ಟಿ. ಪಾಟೀಲ, ರವಿಗೌಡ ಪಾಟೀಲ, ಮುಖಂಡರಾದ ಉಮೇಶ ಬಿಜಾಪುರ, ಗುಡ್ಡಪ್ಪ ಕಾತೂರ, ನಾಗಭೂಷಣ ಹಾವಣಗಿ, ತಹಶೀಲ್ದಾರ್‌ ಶ್ರೀಧರ ಮುಂದಲಮನೆ, ಪಪಂ ಮುಖ್ಯಾಧಿಕಾರಿ ಸಂಗನಬಸಯ್ಯ ಹಾಗೂ ಪಪಂ ಸದಸ್ಯರು, ಮುಖಂಡರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next