Advertisement

ನಲಿ ಕಲಿ ಸ್ಮಾರ್ಟ್‌ ರೂಮ್‌ ಉದ್ಘಾಟನೆ

02:13 PM Jan 27, 2020 | Team Udayavani |

ರಾಯಬಾಗ: ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳ ಬೌದ್ಧಿಕ ಮಟ್ಟ ಹೆಚ್ಚಿಸಲು ಸರಕಾರ ಶೈಕ್ಷಣಿಕ ಕ್ಷೇತ್ರದಲ್ಲಿ ನೂತನ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದು, ಇದರ ಸದುಪಯೋಗವನ್ನು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ತಾಪಂ ಸದಸ್ಯ ನಾಮದೇವ ಕಾಂಬಳೆ ಹೇಳಿದರು.

Advertisement

ರವಿವಾರ ತಾಲೂಕಿನ ಜಲಾಲಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾಪಂ ಅನುದಾನದಲ್ಲಿ ನಿರ್ಮಿಸಿದ್ದ 2 ನಲಿಕಲಿ ತರಗತಿಗಳ ಸ್ಮಾರ್ಟ್‌ ರೂಮ್‌ಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಖಾಸಗಿ ಶಾಲೆಗಳಿಗೆ ಸ್ಪರ್ಧೆ ನೀಡಲು

ಸರ್ಕಾರಿ ಶಾಲೆಗಳಲ್ಲಿ ಕಲಿಯುವ ಮಕ್ಕಳಿಗೆ ಸರಕಾರ ಎಲ್ಲ ಸೌಲಭ್ಯಗಳನ್ನು ಒದಗಿಸುತ್ತಿದೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಉತ್ತಮ ರೀತಿಯಲ್ಲಿ ಬೋಧನೆ ಮಾಡಬೇಕು. ನಲಿಕಲಿ ತರಗತಿಗಳ ಮೂಲಕ ಮಕ್ಕಳು ಆಟದೊಂದಿಗೆ ಪಾಠ ಕಲಿಯಲು ಅನುಕೂಲವಾಗಿದೆ ಎಂದರು.

ಎಸ್‌ಡಿಎಂಸಿ ಅಧ್ಯಕ್ಷ ವಸಂತ ಕಾಂಬಳೆ, ಮುಖ್ಯೋಪಾಧ್ಯಾಯ ಬಿ.ಬಿ. ಪವಾರ, ಬಿ.ವೈ. ಮಾನೆ, ರಾಜು ಕಾಂಬಳೆ, ಉತ್ತಮ ಕಾಂಬಳೆ, ಸಂದೀಪ ಕುರಣೆ, ಅಜೀತ ಕಾಂಬಳೆ, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next