Advertisement

ಯಡಿಯೂರಪ್ಪ ಕ್ಯಾಂಟೀನ್‌ಗೆ ಚಾಲನೆ

12:55 PM Apr 07, 2020 | Suhan S |

ಟಿ.ದಾಸರಹಳ್ಳಿ: ಅಸಂಘಟಿತ ವಲಯ, ಕಡುಬಡವರು ಹಾಗೂ ನಿರ್ಗತಿಕರ ಹಸಿವು ನೀಗಿಸಲು ಸರ್ಕಾರ ಸರ್ವ ಸನ್ನದ್ಧವಾಗಿದ್ದು ದಿನಸಿ ಪೂರೈಕೆಗೆ ದಿಟ್ಟ ಕ್ರಮ ಕೈಗೊಂಡಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ತಿಳಿಸಿದರು.

Advertisement

ಮಲ್ಲಸಂದ್ರ ವಾರ್ಡಿನ ಸೆಲೆಕ್ಷನ್‌ ಕಾರ್ನರ್‌ ನಲ್ಲಿ ಯಡಿಯೂರಪ್ಪ ಕ್ಯಾಂಟೀನ್‌ ಗೆ ಚಾಲನೆ ನೀಡಿ ಮಾತನಾಡಿದರು.ಲಾಕ್‌ ಡೌನ್‌ ತುರ್ತು ಪರಿಸ್ಥಿತಿಯನ್ನು ರಾಜ್ಯ ಸರ್ಕಾರ ಸಮರ್ಥವಾಗಿ ನಿಭಾಯಿಸುತ್ತಿದ್ದು ಕೊರೊನಾ ಸೋಂಕು ಹತೋಟಿಯಲ್ಲಿದೆ ಈ ಅವಧಿಯಲ್ಲಿ ನಿರಾಶ್ರಿತರು ಬಡವರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಈಗಾಗಲೇ 20 ಕೋಟಿ ಹಣ ಖರ್ಚು ಮಾಡಲಾಗಿದೆ. ಕೇಂದ್ರ ಸರಕಾರದಿಂದ 395 ಕೋಟಿ ಬಂದಿದ್ದು, ಕಡು ಬಡವರ ಊಟ ವಸತಿ ಸೇರಿದಂತೆ ತುರ್ತು ಕೆಲಸಗಳಿಗೆ ಹಣ ಬಿಡುಗಡೆ ಮಾಡಲು ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು. ಕಂದಾಯ ಇಲಾಖೆಯಿಂದ 2 ತಿಂಗಳ ವೃದ್ಧಾಪ್ಯ, ವಿಧವಾ ವೇತನ ಸೇರಿದಂತೆ ಇತರೆ ಮಾಸಾಶನಗಳನ್ನು ಮುಂಗಡವಾಗಿ ಬಿಡುಗಡೆಗೊಳಿಸಲಾಗಿದೆ ಎಂದರು.

ಮಾಜಿ ಶಾಸಕ ಮುನಿರಾಜು, ಬೆಂಗಳೂರು ಜಿಪಂ ಅಧ್ಯಕ್ಷ ಮರಿಸ್ವಾಮಿ, ದಾಸರಹಳ್ಳಿ ಬಿಜೆಪಿ ಕ್ಷೇತ್ರಾಧ್ಯಕ್ಷ ಎನ್‌ ಲೋಕೇಶ್‌ ಮುಖಂಡರಾದ ಬಿಎಂ ನಾರಾಯಣ್‌, ಗಂಗರಾಜು, ರವಿಗೌಡ ,ವಿನೋದ್‌ ಗೌಡ ಮೊದಲಾದವರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next