Advertisement

‘Operation Ajay’: ಇಸ್ರೇಲ್​ನಿಂದ ಸುರಕ್ಷಿತವಾಗಿ ತಾಯ್ನಾಡಿಗೆ ಬಂದಿಳಿದ 212 ಭಾರತೀಯರು

08:28 AM Oct 13, 2023 | Team Udayavani |

ನವದೆಹಲಿ: ಯುದ್ಧ ಪೀಡಿತ ಇಸ್ರೇಲ್‌ನಿಂದ 212 ಭಾರತೀಯ ಪ್ರಜೆಗಳನ್ನು ಹೊತ್ತ ‘ಆಪರೇಷನ್ ಅಜಯ್’ ಅಡಿಯಲ್ಲಿ ಮೊದಲ ವಿಮಾನ ಶುಕ್ರವಾರ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಬಂದಿಳಿದಿದೆ.

Advertisement

ಮೊದಲ ಹಂತದ ಆಪರೇಷನ್ ಅಜಯ್ ಕಾರ್ಯಾಚರಣೆಯಲ್ಲಿ ಒಂದು ಮಗು ಸೇರಿ 212 ಮಂದಿ ಭಾರತೀಯರು ಮೊದಲ ಹಂತದಲ್ಲಿ ತಾಯ್ನಾಡಿಗೆ ಬಂದು ಇಳಿದಿದ್ದಾರೆ.

ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಇಸ್ರೇಲ್‌ನಿಂದ ಆಗಮಿಸಿದ ಭಾರತೀಯರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.

ಇಸ್ರೇಲ್ ವಿರುದ್ಧ ಹಮಾಸ್ ಬಂಡುಕೋರರು ಏಕಾಏಕಿ ದಾಳಿ ನಡೆಸಿದ ಬಳಿಕ ಪ್ರತಿಕಾರವಾಗಿ ಇಸ್ರೇಲ್ ಹಮಾಸ್ ನೆಲೆಗಳ ಮೇಲೆ ದಾಳಿ ನಡೆಸಿದ್ದು ಎರಡು ಕಡೆಯ ದಾಳಿ 2,500 ಕ್ಕೂ ಹೆಚ್ಚು ಜನರನ್ನು ಬಲಿತೆಗೆದುಕೊಂಡಿತು. ಹಮಾಸ್ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಇಸ್ರೇಲ್ ಗಾಜಾದಲ್ಲಿ ಭಾರಿ ಪ್ರತಿದಾಳಿ ನಡೆಸಿದೆ.

ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ ಪ್ರಯಾಣಿಕರು:
ಇಸ್ರೇಲ್ ನಲ್ಲಿ ಆತಂಕದಲ್ಲಿ ನೆಲೆಸಿದ್ದ ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ಉದ್ದೇಶದಿಂದ ಕೇಂದ್ರ ಆಪರೇಷನ್ ಅಜಯ್ ಕಾರ್ಯಾಚರಣೆ ಆರಂಭಿಸಿತು ಇದರ ಮೊದಲ ಕಾರ್ಯಾಚರಣೆಯಾಗಿ ಶುಕ್ರವಾರ ಮುಂಜಾನೆ 212 ಮಂದಿ ದೆಹಲಿಗೆ ಬಂದಿಳಿದಿದ್ದು ಈ ವೇಳೆ ಮಾತನಾಡಿದ ಪ್ರಯಾಣಿಕರು ತಮ್ಮನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತಂದ ಕೇಂದ್ರ ಸರಕಾರಕ್ಕೆ ಧನ್ಯವಾದಗಳನ್ನು ಸಲ್ಲಿಸಿದರು.

Advertisement

ಇದನ್ನೂ ಓದಿ: Daily Horoscope: ದಿನಕ್ಕೊಂದು ಬಗೆಯ ಪರೀಕ್ಷೆ ಎದುರಿಸುವುದು ಅನಿವಾರ್ಯ

Advertisement

Udayavani is now on Telegram. Click here to join our channel and stay updated with the latest news.

Next