Advertisement

ಆಪರೇಷನ್‌ ಕಮಲಕ್ಕೆ ಪ್ರಯತ್ನಿಸಿಲ್ಲ: ಶೆಟ್ಟರ್‌

01:14 AM Jan 21, 2019 | |

ಹುಬ್ಬಳ್ಳಿ: ಕಾಂಗ್ರೆಸ್‌ ಶಾಸಕರನ್ನು ಬಿಜೆಪಿ ಸೆಳೆಯುವ ಪ್ರಯತ್ನ ಮಾಡಿಲ್ಲ. ಸಮ್ಮಿಶ್ರಸರ್ಕಾರದಲ್ಲಿರುವ ಗೊಂದಲಗಳನ್ನು ಮರೆಮಾಚುವ ಕಾರಣಕ್ಕೆ ಬಿಜೆಪಿ ನಾಯಕರ ಮೇಲೆ ಕಾಂಗ್ರೆಸ್‌ ಆರೋಪ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಹೇಳಿದರು.

Advertisement

 ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದಲ್ಲಿ ಸಾಕಷ್ಟು ಗೊಂದಲಗಳಿವೆ. ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲಾಗದೆ ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್‌ ಮುಖಂಡರು ಬಿಜೆಪಿ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಬಿಜೆಪಿ ಆಪರೇಶನ್‌ ಕಮಲಕ್ಕೆ ಪ್ರಯತ್ನಿಸಿಲ್ಲ, ಮುಂದೆಯೂ ಮಾಡುವುದಿಲ್ಲ. ಕಾಂಗ್ರೆಸ್‌ನಲ್ಲಿರುವ ಬೇಗುದಿ ಯಾವಾಗ ಸ್ಫೋಟವಾಗುತ್ತದೆ ಗೊತ್ತಿಲ್ಲ. ರೆಸಾರ್ಟ್‌ನಲ್ಲಿರುವ ಶಾಸಕರು ಬಾಟಲಿ ಹಿಡಿದು ಹೊಡೆದಾಟ ಮಾಡಿಕೊಂಡು ಆಸ್ಪತ್ರೆ ಸೇರಿರುವುದರಿಂದ ಪಕ್ಷದ ಸಂಸ್ಕೃತಿ ಬಹಿರಂಗವಾಗಿದೆ. ಪಕ್ಷದ ಶಾಸಕರಿಂದಲೇ ಕಾಂಗ್ರೆಸ್‌ ನಿರ್ನಾಮವಾಗಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next