Advertisement

Wild Elephant: ಚಿಕ್ಕಮಗಳೂರು: ನರಹಂತಕ ಕಾಡಾನೆಯನ್ನು ಸೆರೆ ಹಿಡಿಯುಲು ಆದೇಶ

11:41 AM Nov 25, 2023 | Team Udayavani |

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮೂವರನ್ನು ಬಲಿ ಪಡೆದ ನರಹಂತಕ ಕಾಡಾನೆಯನ್ನು ಸೆರೆ ಹಿಡಿಯುಲು ಆದೇಶಿಸಲಾಗಿದೆ.

Advertisement

ಮಲೆನಾಡಲ್ಲಿ ಮೂರು ಕಾಡಾನೆಗಳನ್ನು ಹಿಡಿಯಲು ಆದೇಶಿಸಿದ್ದು, ಇಂದಿನಿಂದಲೇ ನರಹಂತಕ ಕಾಡಾನೆ ಸೇರಿದಂತೆ 2 ಕಾಡಾನೆ ಸೆರೆ ಕಾರ್ಯಾಚರಣೆ ನಡೆಸಲಾಗುತ್ತಿದೆ.

ನಿರಂತರ ಕಾಡಾನೆ ದಾಳಿಯಿಂದ ಮೂಡಿಗೆರೆ ಜನರು ತತ್ತರಿಸಿದ್ದು, ಜನರ ಆಕ್ರೋಶ, ಪ್ರತಿಭಟನೆ ಹಿನ್ನೆಲೆ ಆನೆ ಸೆರೆಹಿಡಿಯಲು ಆದೇಶಿಸಲಾಗಿದ್ದು, ಪುಂಡಾನೆಗಳನ್ನು ಸೆರೆಹಿಡಿದು ರೆಡಿಯೋ ಕಾಲರಿಂಗ್ ಅಳವಡಿಸಲು ಸೂಚಿಸಲಾಗಿದೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಸಾಕಾನೆಗಳ ಮೂಲಕ ಒಂಟಿ ಸಲಗ ಸೆರೆಹಿಡಿಯುವ ಕಾರ್ಯಾಚರಣೆ ನಡೆಸಲಾಗಿದ್ದು, ಆನೆಯನ್ನು ಸೆರೆ ಹಿಡಿದು ಭದ್ರಾ ಸಂರಕ್ಷಿತಾ ಪ್ರದೇಶಕ್ಕೆ ಸ್ಥಳಾಂತರಿಸಲು ಆದೇಶಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next