Advertisement

ಕೃಷಿ ಚಟುವಟಿಕೆಗೆ ಅವಕಾಶ

02:12 PM Apr 15, 2020 | Suhan S |

ಚಿಕ್ಕಬಳ್ಳಾಪುರ: ಲಾಕ್‌ಡೌನ್‌ ಘೋಷಣೆಯಿಂದ ರೈತರಿಗೆ ಹೆಚ್ಚಿನ ಪೆಟ್ಟು ಬಿದ್ದಿದ್ದು, ರೈತರ ಕೃಷಿ ಉತ್ಪನ್ನಗಳ ಮಾರಾಟ ಹಾಗೂ ಸಾಗಾಟ ಸೇರಿದಂತೆ ಕೃಷಿಗೆ ಸಂಬಂಧಿಸಿದ ಎಲ್ಲಾ ಚಟುವಟಿಕೆಗಳಿಗೆ ಲಾಕ್‌ಡೌನ್‌ ನಿಂದ ಸಂಪೂರ್ಣ ವಿನಾಯಿತ್ತಿ ನೀಡಲಾಗಿದ್ದು, ಬೆಳೆ ನಷ್ಟವಾಗಿರುವ ರೈತರಿಗೆ ಪರಿಹಾರ ಒದಗಿಸುವ ಚಿಂತನೆ ಸರ್ಕಾರ ಮಾಡಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ತಿಳಿಸಿದರು.

Advertisement

ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ಕೃಷಿ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಬಿತ್ತನೆ ಬೀಜ, ಕ್ರಿಮಿನಾಶಕ, ರಸಗೊಬ್ಬರ ಹೆಚ್ಚಿನ ಬೆಲೆಗೆ ಮಾರಾಟ ಮಾಡುವವರ ಹಾಗೂ ಕಳಪೆ ಗುಣಮಟ್ಟದ ರಸಗೊಬ್ಬರ, ಬಿತ್ತನೆ ಬೀಜ ಮಾರಾಟ ಮಾಡುವವರ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸುವುದಾಗಿ ಸಚಿವರು ಎಚ್ಚರಿಸಿದರು. ಶಾಸಕರಾದ ಎಂ.ಕೃಷ್ಣಾರೆಡ್ಡಿ, ಎಸ್‌.ಎನ್‌. ಸುಬ್ಟಾರೆಡ್ಡಿ, ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ, ಉಪಾಧ್ಯಕ್ಷೆ ನಿರ್ಮಲಾ, ಜಿಲ್ಲಾಧಿಕಾರಿ ಆರ್‌.ಲತಾ, ಜಿಪಂ ಸಿಇಒ ಬಿ.ಫೌಝೀಯಾ ತರುನ್ನುಮ್‌, ಜಿಲ್ಲಾ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next