Advertisement

ನೇಮಕಾತಿ ಪರೀಕ್ಷಾ ಫ‌ಲಿತಾಂಶಕ್ಕೆ ಆಕ್ಷೇಪಣೆ ಸಲ್ಲಿಸಲು ಅವಕಾಶ

09:11 PM Mar 12, 2024 | Team Udayavani |

ಬೆಂಗಳೂರು: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ, ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಮೈಸೂರು ಸೇಲ್ಸ್‌ ಇಂಟರ್‌ ನ್ಯಾಷನಲ್‌ ಲಿ. ಸಂಸ್ಥೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ಫ‌ಲಿತಾಂಶಕ್ಕೆ ಆಕ್ಷೇಪಣೆ ಸಲ್ಲಿಸಲು ಮಾ.15ರಿಂದ ಮಾ.20ರ ವರೆಗೆ ಸಮಯ ನೀಡಲಾಗಿದೆ.

Advertisement

ಹಾಗೆಯೇ ಪರೀಕ್ಷೆಗೆ ಹಾಜರಾಗಿ ಯಾವುದಾದರೂ ಪತ್ರಿಕೆಯ ವಿವರಗಳು ಪ್ರಕಟವಾಗದೆ ಇದ್ದಲ್ಲಿ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ನೀಡಿರುವ ನಿಗದಿತ ಲಿಂಕ್‌ನಲ್ಲಿ ನೀಡಲಾಗಿರುವ’ ಯಾವುದೇ ಪತ್ರಿಕೆಯ ಸ್ಕೋರ್‌ ಕಾಣಿಸದಿದ್ದಲ್ಲಿ “ಇಲ್ಲಿ ಕ್ಲಿಕ್‌ ಮಾಡಿ’ ಎಂಬುದನ್ನು ಆಯ್ಕೆ ಮಾಡಿ ಮಾ.14ರೊಳಗೆ ವಿವರಗಳನ್ನು ಅಪ್‌ಲೋಡ್‌ ಮಾಡುವಂತೆ ಕೆಇಎಯ ಕಾರ್ಯನಿರ್ವಾಹಕ ನಿರ್ದೇಶಕರು ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next