Advertisement

ಕೃಷಿ ಕಾಯ್ದೆ ವಿರೋಧಿಸಿ ಮಾ. 26ರಂದು ಕರ್ನಾಟಕ ಬಂದ್‌

10:18 PM Mar 22, 2021 | Team Udayavani |

ಬೆಂಗಳೂರು: ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ, ಮಾ.26ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ.

Advertisement

ರೈತ, ಕಾರ್ಮಿಕ ವಿರೋಧಿ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ, ಸಂಯುಕ್ತ ಹೋರಾಟ ಕರ್ನಾಟಕ ವೇದಿಕೆಯಿಂದ ನಗರದ ಸ್ವತಂತ್ರ ಉದ್ಯಾನದಲ್ಲಿ ನಡೆದ ವಿಧಾನಸೌಧ ಚಲೋ ಕಾರ್ಯಕ್ರಮದಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.

ರೈತ ಮತ್ತು ಕಾರ್ಮಿಕ ವಿರೋಧಿ ಕೃಷಿ ಕಾಯ್ದೆ ರದ್ದತಿಗೆ ಆಗ್ರಹಿಸಿ, ಅಖೀಲ ಭಾರತ್‌ ಕಿಸಾನ್‌ ಸಂಯುಕ್ತ ಮೋರ್ಚಾ ಮಾ.26ರಂದು ಭಾರತ್‌ ಬಂದ್‌ ಘೋಷಿಸಿದೆ. ಇದನ್ನು ಬೆಂಬಲಿಸಿ, ಮಾ.26ರಂದು ರಾಜ್ಯದಲ್ಲಿ ಕರೆ ಕೊಟ್ಟಿರುವ ಕರ್ನಾಟಕ ಬಂದ್‌ ಯಶಸ್ವಿಗೊಳಿಸಬೇಕು ಎಂದು ನಿರ್ಣಯಿಸಲಾಯಿತು.

ಇದನ್ನೂ ಓದಿ :ಹೆದ್ದಾರಿಯ ಅಕ್ಕಪಕ್ಕ ಕಟ್ಟಡ ನಿರ್ಮಾಣ ನಿರ್ಬಂಧ : ಮುಖ್ಯ ಕಾರ್ಯದರ್ಶಿಗಳಿಗೆ ಚರ್ಚಿಸಲು ಸೂಚನೆ

Advertisement

Udayavani is now on Telegram. Click here to join our channel and stay updated with the latest news.

Next