Advertisement

ವಿರೋಧಿಸುವುದೇ ಕೆಲಸ  

12:30 AM Feb 04, 2019 | |

ಹೊಸದಿಲ್ಲಿ: “ಕೇಂದ್ರದ ಯಾವುದೇ ನಿರ್ಧಾರವನ್ನು ವಿರೋಧಿಸುವುದು ಲೋಕಸಭೆಯ ಪ್ರತಿಪಕ್ಷಗಳ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭ್ಯಾಸವಾಗಿಬಿಟ್ಟಿದೆ. ಪ್ರತಿ ವಿಚಾರವನ್ನು ಅವರು ರಾಜಕೀಯವಾಗಿಯೇ ನೋಡುತ್ತಾರೆ’ ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ಟೀಕಿಸಿದ್ದಾರೆ.

Advertisement

ಸಿಬಿಐ ನಿರ್ದೇಶಕರನ್ನಾಗಿ ಮಧ್ಯಪ್ರದೇಶದ ಐಪಿಎಸ್‌ ಅಧಿಕಾರಿ ರಿಷಿ ಕುಮಾರ್‌ ಶುಕ್ಲಾ ಅವರನ್ನು ನೇಮಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ವಿರುದ್ಧ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಇದಕ್ಕೆ ತಮ್ಮ ಬ್ಲಾಗ್‌ನಲ್ಲಿ ಪ್ರತಿಕ್ರಿಯಿಸಿರುವ ಜೇಟಿÉ, “”ಸಿಬಿಐ ನಿರ್ದೇಶಕರ ನೇಮಕಾತಿಯಲ್ಲೂ ಖರ್ಗೆ ರಾಜಕೀಯ ಮಾಡಲು ಹೊರಟಿದ್ದಾರೆ. ಪ್ರಧಾನಿ ನೇತೃತ್ವದ ಆಯ್ಕೆ ಸಮಿತಿಯಲ್ಲಿ ಏನು ಬದಲಾದರೂ ಖರ್ಗೆಯವರ ಈ ಮನಸ್ಥಿತಿ ಮಾತ್ರ ಬದಲಾಗುವುದಿಲ್ಲ” ಎಂದು ಹೇಳಿದ್ದಾರೆ.
 

Advertisement

Udayavani is now on Telegram. Click here to join our channel and stay updated with the latest news.

Next