Advertisement

ಕಾಂಗ್ರೆಸ್‌ ಹೈಕಮಾಂಡ್‌ ಬಾಗಿಲಲ್ಲಿ ಹುದ್ದೆ ಆಕಾಂಕ್ಷಿಗಳು

11:34 PM Dec 15, 2019 | Team Udayavani |

ಬೆಂಗಳೂರು: ಉಪ ಚುನಾವಣೆಯ ಸೋಲಿನ ನೈತಿಕ ಹೊಣೆ ಹೊತ್ತು ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್‌ ಗುಂಡೂರಾವ್‌ ರಾಜೀನಾಮೆ ಸಲ್ಲಿಸಿರುವುದರಿಂದ ಹುದ್ದೆ ಆಕಾಂಕ್ಷಿಗಳು ದೆಹಲಿಯಲ್ಲಿ ಹೈಕಮಾಂಡ್‌ ಭೇಟಿಗೆ ಕಸರತ್ತು ಮುಂದುವರಿಸಿದ್ದಾರೆ. ಶನಿವಾರ ದೆಹಲಿಯಲ್ಲಿ ಪಕ್ಷದ ವತಿಯಿಂದ ನಡೆದ ಭಾರತ್‌ ಬಚಾವೋ ಆಂದೋಲನದಲ್ಲಿ ಪಾಲ್ಗೊಳ್ಳಲು ರಾಜ್ಯ ನಾಯಕರಾದ ಎಚ್‌.ಕೆ.ಪಾಟೀಲ್‌, ಡಿ.ಕೆ.ಶಿವಕುಮಾರ್‌, ಮಲ್ಲಿಕಾರ್ಜುನ ಖರ್ಗೆ, ಈಶ್ವರ್‌ ಖಂಡ್ರೆ, ಎಂ.ಬಿ.ಪಾಟೀಲ್‌, ಡಾ.ಜಿ.ಪರಮೇಶ್ವರ್‌ ದೆಹಲಿಗೆ ತೆರಳಿದ್ದರು.

Advertisement

ಪ್ರತಿಭಟನೆ ಮುಗಿದ ನಂತರ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿಯನ್ನು ಭೇಟಿ ಮಾಡಲು ಪ್ರಯತ್ನ ನಡೆಸಿದ್ದಾರೆ. ಭಾನುವಾರ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಅವರ ಭೇಟಿಗೆ ಯಾರೊಬ್ಬರಿಗೂ ಅವಕಾಶ ದೊರೆತಿಲ್ಲ. ಕೆಲವು ನಾಯಕರು ಇಬ್ಬರೂ ನಾಯಕರ ಭೇಟಿಯಾಗದೇ ವಾಪಸ್‌ ಬಂದಿದ್ದು, ಕೆಲವರು ಸೋಮವಾರವೂ ಭೇಟಿಗೆ ಪ್ರಯತ್ನ ಮುಂದುವರಿಸ ಲಿದ್ದಾರೆ ಎಂದು ತಿಳಿದು ಬಂದಿದೆ.

ಇಬ್ಬರೂ ನಾಯಕರು ನೀಡಿರುವ ರಾಜೀನಾಮೆ ಅಂಗೀಕರಿಸುವ ಬಗ್ಗೆ ಪಕ್ಷದ ಹೈಕಮಾಂಡ್‌ ಇನ್ನೂ ಯಾವುದೇ ನಿರ್ಧಾರ ತೆಗೆದು ಕೊಳ್ಳದಿರುವುದರಿಂದ ಅವರನ್ನೇ ಇನ್ನಷ್ಟು ದಿನ ಮುಂದುವರಿಸುತ್ತಾರೆ ಎಂಬ ಮಾತುಗಳೂ ಕೇಳಿ ಬರುತ್ತಿವೆ. ಸದ್ಯ ಜಾರ್ಖಂಡ್‌ ವಿಧಾನಸಭೆ ಚುನಾವಣೆ ನಡೆಯುತ್ತಿರುವು ದರಿಂದ ಪಕ್ಷದ ಹೈಕಮಾಂಡ್‌ ಚುನಾವಣೆ ಮುಗಿಯುವವರೆಗೂ ಯಾವುದೇ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ. ಹೀಗಾಗಿ ರಾಜ್ಯ ನಾಯಕರು ನಿರಾಸೆಯಿಂದ ವಾಪಾಸ್ಸಾಗುತ್ತಿದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next