Advertisement

I.N.D.I.A: ಇಂದು ವಿಪಕ್ಷಗಳ ಒಕ್ಕೂಟದ ಸಭೆ

11:29 PM Sep 12, 2023 | Team Udayavani |

ಹೊಸದಿಲ್ಲಿ: ಮಹಾರಾಷ್ಟ್ರದ ಮುಂಬಯಿಯಲ್ಲಿರುವ ಎನ್‌ಸಿಪಿ ನಾಯಕ ಶರದ್‌ ಪವಾರ್‌ ನಿವಾಸದಲ್ಲಿ ಬುಧವಾರ ಸಂಜೆ ವಿಪಕ್ಷ ಐ.ಎನ್‌.ಡಿ.ಐ.ಎ. ಸಭೆ ನಡೆಯಲಿದೆ. ಲೋಕಸಭೆ ಚುನಾವಣೆಯಲ್ಲಿನ ಸೀಟು ಹಂಚಿಕೆ ವಿಷಯವು ಪ್ರಮುಖವಾಗಿ ಚರ್ಚೆಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ.

Advertisement

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಎದುರು ವಿಪಕ್ಷಗಳಿಂದ ಒಮ್ಮತದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಯೋಜಿಸಲಾಗಿದೆ. ಚುನಾವಣೆ ಸಮೀಪಿಸುತ್ತಿದ್ದಂತೆ ಈ ವಿಚಾರದಲ್ಲಿ ಗೊಂದಲ ಆಗುವ ಬದಲು ಮೊದಲೇ ಒಕ್ಕೂಟ ಪಕ್ಷಗಳ ನಡುವೆ ಸೀಟು ಹಂಚಿಕೆ ಆಗಬೇಕೆಂಬುದು ಹಲವು ನಾಯಕರ ಅಭಿಪ್ರಾಯವಾಗಿದೆ. ಜತೆಗೆ ಈ ವಿಷಯದಲ್ಲಿ ಅಹಂಕಾರ ಮತ್ತು ಪಟ್ಟಬದ್ಧ ಹಿತಾಸಕ್ತಿಗಳನ್ನು ಬದಿಗೆ ಸರಿಸಿ, ಸೂಕ್ತ ತೀರ್ಮಾನಕ್ಕೆ ಬರಬೇಕೆಂಬುದೂ ಅವರ ಇಂಗಿತವಾಗಿದೆ ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next