Advertisement

ಸದಾನಂದಗೌಡರಿಗೆ ಅವಮಾನ ಮಾಡುವ ಕೆಲಸವನ್ನು ವಿರೋಧ ಪಕ್ಷ ಮಾಡಿದೆ : ಕಟ್ಟಾ ಸುಬ್ರಹ್ಮಣ್ಯ

05:17 PM Jun 19, 2021 | Team Udayavani |

ಬೆಂಗಳೂರು : ಕಳೆದ ಬಾರಿ 4 ಲಕ್ಷ ಜನರಿಗೆ ದಿನಸಿ ನೀಡಿ ಸಹಾಯ ಮಾಡಲಾಗಿತ್ತು. ಈ ಬಾರಿ ನಿರೀಕ್ಷೆ ಮೀರಿ ಸಹಾಯ ಮಾಡಲು ಪ್ರಯತ್ನ ಮಾಡ್ತಾ ಇದ್ದೇವೆ. ನಾವು ಅಧಿಕಾರದಲ್ಲಿ ಇದ್ದಾಗ ವಿರೋಧ ಪಕ್ಷದವರನ್ನು ಕೆಟ್ಟದಾಗಿ ನಡೆಸಿಕೊಳ್ಳಲಿಲ್ಲ. ಆದರೆ ಈಗ ಒಬ್ಬ ಕೇಂದ್ರ ಮಂತ್ರಿ ಸದಾನಂದಗೌಡ ಬಂದಾಗ ಅವಮಾನ ಮಾಡುವ ಕೆಲಸ ವಿರೋಧ ಪಕ್ಷದವರು ಮಾಡಿದ್ದಾರೆ. ನಾವು ಹಿಂದೆ ಸಂಸದರಾಗಿದ್ದ ಜಾಫರ್ ಷರೀಫ್ ಅವರನ್ನು ಗೌರವದಿಂದ ನಡೆಸಿಕೊಂಡಿದ್ದೇವೆ. ಆದರೆ ದಬ್ಬಾಳಿಕೆ ಬಹಳ ದಿನ ನಡೆಯಲ್ಲ ಎಂದು ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಹೇಳಿಕೆ ನೀಡಿದ್ದಾರೆ.

Advertisement

ನಾವು ಅಧಿಕಾರದಲ್ಲಿ ಇದ್ದಾಗ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಹೆಬ್ಬಾಳದಲ್ಲಿ ನಿರಂತವಾಗಿ ಆಹಾರ ಧಾನ್ಯ ನೀಡುವ ಕೆಲಸ ಮುಂದುವರಿಯಲಿದೆ. ಯಡಿಯೂರಪ್ಪ ಅವರ ಸರ್ಕಾರ ಕ್ರಿಯಾಶೀಲ ಸರ್ಕಾರವಾಗಿದೆ. ನಾವು ಬಡವರಿಗೆ ಸಹಾಯಹಸ್ತ ಮಾಡುವ ಪ್ರಕ್ರಿಯೆ ನಿರಂತರವಾಗಿ ಮುಂದುವರಿಯಲಿದೆ.

ಕೋವಿಡ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸಹಾಯಹಸ್ತ

ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿದಲ್ಲಿ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ನೇತೃತ್ವದಲ್ಲಿ ಪುಡ್ ಕಿಟ್ ವಿತರಣೆ ಮಾಡಲಾಯಿಉ. ವಾರ್ಡ್ ನಂಬರ್ 21 ರಲ್ಲಿ ಪುಡ್ ಕಿಟ್ ವಿತರಣೆ ಮಾಡಲಾಯಿತು. ಸುಮಂಗಲಿ ಆಶ್ರಮ ಬಳಿ ದಿನಸಿ ಕಿಟ್ ವಿತರಣೆ ಮಾಡಿ ಮಾತನಾಡಿದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು,  ಹೆಬ್ಬಾಳ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ಕೊಡಲಾಗಿದೆ. ಯಡಿಯೂರಪ್ಪ ನಾಯಕತ್ವದಲ್ಲಿ ಅಭಿವೃದ್ಧಿ ಕಾರ್ಯ ನಡೆಯಲಿದೆ. ಕ್ಷೇತ್ರದಲ್ಲಿ ಸೇವಾ ಕಾರ್ಯ ಮುಂದುವರಿಸಲು ತಿರ್ಮಾನಿಸಲಾಗಿದೆ. ನಮ್ಮ ನಾಯಕರಾದ ಯಡಿಯೂರಪ್ಪ ನವರು ಅಗತ್ಯ ಸಹಕಾರ ನೀಡುವ ಭರವಸೆ ಕೊಟ್ಟಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next