Advertisement

Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ

09:24 PM Sep 17, 2024 | Team Udayavani |

ತುಮಕೂರು: ನಂದಿನಿ ಹಾಲಿನ ದರವನ್ನು 5 ರೂ. ಹೆಚ್ಚಳ ಮಾಡಿ ಆ ಮೊತ್ತವನ್ನು ರೈತರಿಗೆ ಕೊಡುವುದಾದರೆ ನಮ್ಮ ಅಭ್ಯಂತರವಿಲ್ಲ. ಆದರೆ, ರೈತರ ನೆಪದಲ್ಲಿ ದರ ಹೆಚ್ಚಳ ಮಾಡಿ ಆ ಹಣವನ್ನು ಗ್ಯಾರಂಟಿ ಯೋಜನೆಗೆ ಉಪಯೋಗಿಸಿಕೊಂಡರೆ ವಿರೋಧಿಸುವುದಾಗಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಸಿದ್ದರಾಮಯ್ಯನವರಿಗೆ ಸುಳ್ಳು ಹೇಳಲು ಆಗುತ್ತಿಲ್ಲ. ಈ ಹಿಂದೆ 5 ವರ್ಷ ಆಡಳಿತ ನಡೆಸಿದಂತೆ ಈಗ ಅವರಿಂದ ಆಡಳಿತ ನಡೆಸಲು ಸಾಧ್ಯವಾಗುತ್ತಿಲ್ಲ. ಜನಪರ ಕಾರ್ಯಕ್ರಮಗಳಿಗೆ ಧಕ್ಕೆಯಾಗುತ್ತಿದೆ.

ಅಂದಿನ ಸಿದ್ದರಾಮಯ್ಯನವರೇ ಬೇರೆ, ಇವತ್ತಿನ ಸಿದ್ದರಾಮಯ್ಯನವರೇ ಬೇರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next