Advertisement

ವಿಪಕ್ಷ ನಾಯಕ: ಪೈಪೋಟಿ; ಸಿದ್ದರಾಮಯ್ಯ-ಎಚ್‌ಕೆಪಿ ನಡುವೆ ತೀವ್ರ ಸ್ಪರ್ಧೆ

12:07 PM Oct 05, 2019 | Sriram |

ಬೆಂಗಳೂರು: ರಾಜ್ಯ ವಿಧಾನ ಮಂಡಲ ಅಧಿವೇಶನ ಹತ್ತಿರವಾಗುತ್ತಿರುವಂತೆ ಕಾಂಗ್ರೆಸ್‌ನಲ್ಲಿ ಮತ್ತೆ ವಿಪಕ್ಷ ನಾಯಕನ ಸ್ಥಾನಕ್ಕೆ ಕಸರತ್ತು ಆರಂಭವಾಗಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಸಚಿವ ಎಚ್‌.ಕೆ.ಪಾಟೀಲ್‌ ನಡುವೆ ತುರುಸಿನ ಸ್ಪರ್ಧೆ ಏರ್ಪಟ್ಟಿದೆ. ಇವರಿಬ್ಬರ ಜತೆಯಲ್ಲಿ ಪರಮೇಶ್ವರ್‌ ಹೆಸರೂ ಕೇಳಿಬರುತ್ತಿದೆ.

Advertisement

ಸಿದ್ದರಾಮಯ್ಯ ಅವರಿಗೆ ವಿಪಕ್ಷ ನಾಯಕನ ಸ್ಥಾನ ನೀಡುವ ಬಗ್ಗೆ ಮೂಲ ಕಾಂಗ್ರೆಸಿಗರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಅದಕ್ಕೆ ಪ್ರತಿಯಾಗಿ ತನ್ನನ್ನು ಪರಿಗಣಿಸ ದಿದ್ದರೆ ಮುಂಬರುವ ಉಪ ಚುನಾವಣೆಯಲ್ಲಿ ತಾನು ತಟಸ್ಥ ಧೋರಣೆ ತಾಳುವ ಬಗ್ಗೆ ಹೈಕಮಾಂಡ್‌ಗೆ ಸಂದೇಶ ರವಾನಿಸಿದ್ದಾರೆ ಎನ್ನಲಾಗಿದ್ದು, ಇದೇ ಕಾರಣಕ್ಕೆ ವಿಪಕ್ಷ ನಾಯಕನ ಆಯ್ಕೆ ವಿಷಯದಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಗೊಂದಲಕ್ಕೆ ಸಿಲುಕಿದೆ.

ಅ. 10ರಿಂದ ವಿಧಾನ ಮಂಡಲ ಅಧಿವೇಶನ ಶುರು ವಾಗ ಲಿದ್ದು, ಅಷ್ಟರೊಳಗೆ ಹೈಕಮಾಂಡ್‌ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ ಎಂಬುದು ರಾಜ್ಯ ಕಾಂಗ್ರೆಸ್‌ ನಾಯಕರ ಆಶಾಭಾವ. ಈ ಕುರಿತಂತೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಗುರುವಾರ ತನ್ನ ನಿವಾಸದಲ್ಲಿ ಅನೌಪಚಾರಿಕ ಸಭೆ ನಡೆಸಿದ್ದು, ಎಂ.ಬಿ. ಪಾಟೀಲ್‌, ಜಮೀರ್‌ ಅಹಮದ್‌, ಚೆಲುವ ರಾಯಸ್ವಾಮಿ, ಎಚ್‌.ಸಿ. ಬಾಲಕೃಷ್ಣ, ಸಿ.ಎಂ.ಇಬ್ರಾಹಿಂ, ಬೈರತಿ ಸುರೇಶ್‌, ಎಲ್‌. ಹನುಮಂತಯ್ಯ ಪಾಲ್ಗೊಂಡಿದ್ದರು.

ಎಚ್‌ಕೆಪಿ ಪರ ಭಾರೀ ಲಾಬಿ
ಮಾಜಿ ಸಚಿವ ಹಾಗೂ ಹಿರಿಯ ನಾಯಕರಾಗಿರುವ ಎಚ್‌.ಕೆ. ಪಾಟೀಲ್‌ ವಿಪಕ್ಷ ನಾಯಕನ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದು, ಪ್ರಮುಖವಾಗಿ ಮೂಲ ಕಾಂಗ್ರೆಸಿಗರಾದ ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್‌. ಮುನಿಯಪ್ಪ , ಎಂ. ವೀರಪ್ಪ ಮೊಲಿ, ಬಿ.ಕೆ. ಹರಿಪ್ರಸಾದ್‌ ಸಹಿತ ರಾಜ್ಯಸಭೆ ಸದಸ್ಯರು ಎಚ್‌.ಕೆ. ಪಾಟೀಲ್‌ ಪರವಾಗಿ ಹೈಕಮಾಂಡ್‌ ಮಟ್ಟದಲ್ಲಿ ಲಾಬಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next