Advertisement

ಅಧ್ಯಕ್ಷರಾಗದೇ ಇದ್ದವರೂ ಸಿಎಂ ಆದ ಸಂಪ್ರದಾಯ ಇದೆ : ಡಿಕೆಗೆ ಸಿದ್ದು‌ ತಿರುಗೇಟು

12:00 PM Jul 20, 2022 | Team Udayavani |

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾದವರೇ ಸಿಎಂ ಆಗುವುದು ಸಂಪ್ರದಾಯ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ವಾದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

Advertisement

ಖಾಸಗಿ ಟಿವಿ ಚಾನಲ್ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದವರೇ ಸಿಎಂ ಆಗಲೇಬೇಕು ಎಂದೇನಿಲ್ಲ. ಆಗದೇ ಇದ್ದವರನ್ನೂ ಮುಖ್ಯಮಂತ್ರಿಯಾಗಿ ಮಾಡಿದ ಸಂಪ್ರದಾಯ ಇದೆ. ಪಂಜಾಬಿನಲ್ಲಿ ಈ ರೀತಿ ಮಾಡಿಲ್ಲವೇ ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಕಾಂಗ್ರೆಸ್‌ ನಲ್ಲಿ ಡಿಕೆಶಿ ಒಂದು ತೀರ, ಸಿದ್ದರಾಮಯ್ಯ ಇನ್ನೊಂದು ತೀರ: ಸಿಎಂ ವ್ಯಂಗ್ಯ 

ಯಾರು ಬೇಕಾದರೂ ಮುಖ್ಯಮಂತ್ರಿಯಾಗುತ್ತಾನೆ ಎಂದು ಆಕಾಂಕ್ಷೆ ವ್ಯಕ್ತಪಡಿಸಬಹುದು. ತಮ್ಮ ಸಮುದಾಯದ ಸಭೆಯಲ್ಲಿ ನಾನು ಸಿಎಂ ಆಗುವುದಕ್ಕೆ ಅವಕಾಶವಿದೆ. ಬೆಂಬಲ ನೀಡಿ ಎಂದು ಡಿ.ಕೆ.ಶಿವಕುಮಾರ್ ಹೇಳುದರಲ್ಲಿ ಯಾವುದೇ ತಪ್ಪಿಲ್ಲ. ಆದರೆ ಅಂತಿಮವಾಗಿ ಅದನ್ನು ನಿರ್ಧರಿಸುವವರು ಶಾಸಕರು ಹಾಗೂ ಹೈಕಮಾಂಡ್ ಎಂದು ಹೇಳುವ ಮೂಲಕ ತಮ್ಮ‌ ಜತೆ ಶಾಸಕರು ಇದ್ದಾರೆ ಎಂದು‌ ಪರೋಕ್ಷ ಸಂದೇಶ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next