Advertisement
ರಾಜ್ಯದಲ್ಲಿರುವ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಪೂರ್ಣ ಅವಧಿ ಪೂರೈಸುವುದು ಅನುಮಾನ ಎಂಬ ಮಾತುಗಳು ಕೇಳಿ ಬರುತ್ತಿರುವುದರಿಂದ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾದರೆ, ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರಲು ಸಿದ್ದರಾಮಯ್ಯ ಅನಿವಾರ್ಯ ಎಂಬ ಮಾತುಗಳು ಅವರ ಆಪ್ತ ವಲಯದಲ್ಲಿ ಕೇಳಿ ಬರುತ್ತಿದೆ. ಹೀಗಾಗಿ, ಹೈಕಮಾಂಡ್ ಕೂಡ ಸಿದ್ದರಾಮಯ್ಯ ಅವರನ್ನು ಸುಲಭವಾಗಿ ಬಿಟ್ಟು ಕೊಡಲಾರದ ಸ್ಥಿತಿಗೆ ತಲುಪಿದೆ ಎನ್ನಲಾಗುತ್ತಿದೆ.
Related Articles
Advertisement
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ?: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೂಡ ಸಿದ್ದರಾಮಯ್ಯ ಅವರ ಸೂಚನೆ ಯಂತೆ ನಡೆಯುತ್ತಿದ್ದಾರೆಂಬ ಆರೋಪ ಇರುವುದರಿಂದ ಒಂದು ವೇಳೆ ಸಿದ್ದರಾಮಯ್ಯ ಅವರನ್ನು ಪ್ರತಿಪಕ್ಷ ನಾಯಕರನ್ನಾಗಿ ಮಾಡಲು ಹೈಕಮಾಂಡ್ ಮುಂದಾದರೆ, ಕೆಪಿಸಿಸಿ ಅಧ್ಯಕ್ಷರನ್ನಾದರೂ ಬದಲಾಯಿಸಬೇಕೆಂಬ ಆಗ್ರಹವೂ ಕೇಳಿ ಬರುವ ಸಾಧ್ಯತೆ ಇದೆ.
ಸೋನಿಯಾ ನಿರ್ಧಾರ ಕಷ್ಟ: ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾಗಿದ್ದರೆ, ಪ್ರತಿಪಕ್ಷ ನಾಯಕನ ಸ್ಥಾನವನ್ನು ಸಿದ್ದರಾಮಯ್ಯಗೆ ನೀಡುವ ವಿಚಾರ ಇಷ್ಟೊತ್ತಿಗೆ ಇತ್ಯರ್ಥವಾ ಗುತ್ತಿತ್ತು. ಆದರೆ, ಸೋನಿಯಾ ಗಾಂಧಿ ಯಾವುದೇ ವಿಷಯ ವಾಗಿ ಏಕಮುಖ ತೀರ್ಮಾನ ತೆಗೆದುಕೊಳ್ಳುವುದಿಲ್ಲ ಎಂಬ ಮಾತುಗಳು ಕಾಂಗ್ರೆಸ್ನಲ್ಲಿ ಕೇಳಿ ಬರುತ್ತಿವೆ. ಅದೇ ಕಾರಣಕ್ಕೆ ಸಿದ್ದರಾಮಯ್ಯನವರು ದೆಹಲಿಯಲ್ಲಿ ಸೋನಿಯಾ ಗಾಂಧಿ ಆಪ್ತ ನಾಯಕರನ್ನು ಭೇಟಿ ಮಾಡಿ, ಅವರಿಗೂ ತಮ್ಮ ಪರ ಲಾಬಿ ನಡೆಸಲು ಮನವಿ ಮಾಡಿಕೊಳ್ಳುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ.
ಪದಾಧಿಕಾರಿಗಳ ಪಟ್ಟಿ ಒಪ್ಪಿಗೆಗೆ ಕಸರತ್ತು: ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತರಾತುರಿ ಯಲ್ಲಿ ಅಧ್ಯಕ್ಷ, ಕಾರ್ಯಾಧ್ಯಕ್ಷರನ್ನು ಹೊರತು ಪಡೆಸಿ ಕೆಪಿಸಿಸಿ ವಿಸರ್ಜಿಸುವಲ್ಲಿ ಯಶಸ್ವಿಯಾಗಿರುವ ಸಿದ್ದರಾಮಯ್ಯ, ಈಗ ಹೊಸ ಪದಾಧಿಕಾರಿಗಳ ಪಟ್ಟಿಗೆ ಒಪ್ಪಿಗೆ ಪಡೆಯಲು ದಿನೇಶ್ ಗುಂಡೂರಾವ್ ಮೂಲಕ ಪ್ರಯತ್ನ ನಡೆಸಿದ್ದಾರೆ ಎನ್ನಲಾಗು ತ್ತಿದೆ. ಇವರು ಸಿದ್ದಪಡಿಸಿದ್ದ ಪಟ್ಟಿಗೂ ರಾಜ್ಯದ ಅನೇಕ ಹಿರಿಯ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಒಂದು ಬಾರಿ ಪಟ್ಟಿ ಪರಿಷ್ಕರಿಸುವಂತೆ ಹೈ ಕಮಾಂಡ್ ವಾಪಸ್ ಕಳುಹಿಸಿತ್ತು. ಈಗ ಮತ್ತೆ ಪಟ್ಟಿಯನ್ನು ಪರಿಷ್ಕರಿಸಿ ಹೈಕಮಾಂಡ್ ಒಪ್ಪಿಗೆಗೆ ತೆಗೆದುಕೊಂಡು ಹೋಗಿದ್ದರು. ಆದರೆ ಈ ಬಾರಿಯೂ ಮನ್ನಣೆ ಸಿಕ್ಕಿಲ್ಲ.