Advertisement

ಶಾಲೆಗಳ ಮಾನ್ಯತೆ ನವೀಕರಣ ಆದೇಶಕ್ಕೆ ವಿರೋಧ

02:02 PM Apr 27, 2020 | Team Udayavani |

ಹುಬ್ಬಳ್ಳಿ: ಲಾಕ್‌ಡೌನ್‌ ಸಂದರ್ಭದಲ್ಲಿ ಖಾಸಗಿ ಅನುದಾನರಹಿತ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಆದೇಶ ಮಾಡಿರುವುದು ಸಮಂಜಸವಲ್ಲ. ಕೂಡಲೇ ಈ ಆದೇಶವನ್ನು ವಾಪಸ್‌ ಪಡೆಯುವಂತೆ ಅಧಿಕಾರಿಗಳ ಸೂಚನೆ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿ ಅಸೋಸಿಯೇಶನ್‌ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಅವರಿಗೆ ಮನವಿ ಸಲ್ಲಿಸಲಾಯಿತು.

Advertisement

ಕೋವಿಡ್ 19 ವೈರಸ್‌ ನಿಯಂತ್ರಿಸುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿಗಳು ದೇಶಾದ್ಯಂತ ಮೇ 3ರ ವರೆಗೆ ಲಾಕ್‌ಡೌನ್‌ ಘೋಷಿಸಿದ್ದಾರೆ. ಆದರೆ ಮೇ 5ರೊಳಗೆ ಖಾಸಗಿ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಮಾನ್ಯತೆ ನವೀಕರಣ ಮಾಡಿಕೊಳ್ಳುವಂತೆ ಇಲ್ಲಿನ ಉಪನಿರ್ದೇಶಕರು ಆದೇಶ ಹೊರಡಿಸಿದ್ದು, ಇಲ್ಲದಿದ್ದರೆ ಶಾಲೆಯ ಆಡಳಿತ ಮಂಡಳಿ ಹಾಗೂ ಪ್ರಧಾನ ಗುರುಗಳು ಹೊಣೆಗಾರರು ಎಂದು ಸೂಚಿಸಿದ್ದಾರೆ.

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಆಯುಕ್ತರು ಶಾಲಾ-ಕಾಲೇಜುಗಳನ್ನು ಬಂದ್‌ ಮಾಡಿ ಸುತ್ತೋಲೆ ಹೊರಡಿಸಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳಿಂದ ಶುಲ್ಕ ಪಡೆಯಲು ಕೆಲ ನಿರ್ಬಂಧಗಳನ್ನು ಹೇರಿದ್ದಾರೆ. ಸರಕಾರದಿಂದ ಆರ್‌ಟಿಇ ಶುಲ್ಕ ಬಾಕಿ ಪಾವತಿ ಮಾಡಿಲ್ಲ. ಲಾಕ್‌ ಡೌನ್‌ ಮುಗಿಯುವವರೆಗೂ ಯಾರೂ ಶಾಲೆಗಳು ಹೋಗುವಂತಿಲ್ಲ. ಪರಿಸ್ಥಿತಿ ಹೀಗಿರುವಾಗ ಇಲ್ಲಿನಶಿಕ್ಷಣಾಧಿಕಾರಿಗಳು ಶಾಲೆಗಳ ನವೀಕರಣಕ್ಕೆ ಆದೇಶ ಹೊರಡಿಸಿರುವುದು ಸರಿಯಲ್ಲ. ಕೂಡಲೇ ಈ ಆದೇಶ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಒತ್ತಾಯಿಸಿದರು.

ಅಧ್ಯಕ್ಷ ಜಯಪ್ರಕಾಶ ಟೆಂಗಿನಕಾಯಿ, ಮುರಳಿಧರ ಬಾಬಜಿ, ಲಿಂಗರಾಜ ಪಾಟೀಲ, ರಾಜಾ ದೇಸಾಯಿ, ಡಾ| ಹನುಮರಡ್ಡಿ, ಮಹೇಂದ್ರ ಸಿಂಘಿ, ಗಿರೀಶ ಉಪಾಧ್ಯಾಯ ಹಾಗೂ ಇನ್ನಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next