Advertisement
ಬೆಳಿಗ್ಗೆ ಕಾವೇರಮ್ಮ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಪ್ರಾಥಮಿಕ ಶಾಲಾ ಹೆಚ್ಚುವರಿ ಶಿಕ್ಷಕರ ಕೌನ್ಸೆಲಿಂಗ್ ಸಾಮೂಹಿಕವಾಗಿ ಬಹಿಷ್ಕರಿಸಿದ ಹೊನ್ನಾಳಿ, ಚನ್ನಗಿರಿ ತಾಲೂಕು ದಾವಣಗೆರೆ ದಕ್ಷಿಣ, ಉತ್ತರ ವಲಯ ವ್ಯಾಪ್ತಿಯ ಪ್ರಾಥಮಿಕ ಶಾಲಾ ಶಿಕ್ಷಕರು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಎಸ್. ಪರಮೇಶ್ವರಪ್ಪನವರಿಗೆ ಮನವಿ ಸಲ್ಲಿಸಿ, ಪ್ರಕ್ರಿಯೆ ಕೈ ಬಿಡಬೇಕೆಂದು ಆಗ್ರಹಿಸಿದರು.
ಕೈಗೊಳ್ಳುವಂತೆ ಕೋರಿದರು. ಪ್ರತಿಭಟನೆಗೆ ಕಾರಣ: ಪ್ರಾಥಮಿಕ ಶಾಲಾ ಶಿಕ್ಷಕರ ಹೆಚ್ಚುವರಿ ವರ್ಗಾವಣೆ ಪ್ರಕ್ರಿಯೆಯಲ್ಲಿ ಹರಪನಹಳ್ಳಿ ತಾಲೂಕನ್ನು ದಾವಣಗೆರೆ ಜಿಲ್ಲೆಗೆ ಪರಿಗಣಿಸಬಾರದು ಎಂಬುದು ಶಿಕ್ಷಕರ ಬೇಡಿಕೆ.
Related Articles
Advertisement
ಆಗ ನಮಗೆ ವೃತ್ತಿಯಲ್ಲಿ ಯಾವುದೇ ಬಡ್ತಿ ಸಿಗುವುದಿಲ್ಲ. ನಮ್ಮ ಜಿಲ್ಲೆಗೂ ವರ್ಗಾವಣೆ ಕೇಳಲು ಬರದೇ ಶಾಶ್ವತವಾಗಿ ಆ ಜಿಲ್ಲೆಯಲ್ಲೇ ಕೊಳೆಯಬೇಕಾಗುತ್ತದೆ ಎಂದು ಶಿಕ್ಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಹರಪನಹಳ್ಳಿ ತಾಲೂಕಿಗೆ ಈಗಾಗಲೇ ಹೆಚ್ಚುವರಿಯಾಗಿ ವರ್ಗಾವಣೆಗೊಂಡಶಿಕ್ಷಕರೆಲ್ಲರೂ ಸರ್ಕಾರ, ಶಿಕ್ಷಣ ಇಲಾಖೆ ಆಯುಕ್ತರಿಗೆ ಪುನಃ ದಾವಣಗೆರೆ ಜಿಲ್ಲೆಗೆ ವರ್ಗಾಯಿಸಲು ಮನವಿ ಮಾಡಿದ್ದಾರೆ.
ಇನ್ನು ಹರಪನಹಳ್ಳಿ ತಾಲೂಕನ್ನು ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ದಾವಣಗೆರೆ ಜಿಲ್ಲೆಗೆ ಪರಿಗಣಿಸಿದರೆ ಅಲ್ಲಿ ಹೆಚ್ಚು ಹುದ್ದೆಗಳು ಖಾಲಿ ಇದ್ದು, ನೂರಾರು ಶಿಕ್ಷಕರು ಅನಿವಾರ್ಯವಾಗಿ ಹರಪನಹಳ್ಳಿ ತಾಲೂಕನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ಹಾಗಾಗಿ ಹೆಚ್ಚುವರಿ ಪ್ರಕ್ರಿಯೆಯಲ್ಲಿ ದಾವಣಗರೆ ಜಿಲ್ಲೆಗೆ ಹರಪನಹಳ್ಳಿ ತಾಲೂಕನ್ನು ಪರಿಗಣಿಸಬಾರದು ಎಂಬುದಾಗಿ ಒತ್ತಾಯಿಸಿದ್ದಾರೆ. ಮನವಿ ಸಲ್ಲಿಸಿದ ಸಂದರ್ಭದಲ್ಲಿ ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ. ಸಿದ್ದೇಶಿ, ಓಂಕಾರಪ್ಪ, ಶಿವಲಿಂಗಪ್ಪ, ಆರ್.ಜಿ. ಅಜ್ಜಯ್ಯ, ಮಹಾರುದ್ರಪ್ಪ, ಟಿ.ಎಂ. ಸುಧಾ, ಪ್ರಕಾಶ್ ಮಡಿವಾಳ, ಇತರರು ಉಪಸ್ಥಿತರಿದ್ದರು.