Advertisement

ವಂದೇ ಮಾತರಂ ಗೀತೆಗೆ ವಿರೋಧದಿಂದ ದೇಶದ ಏಕತೆಗೆ ಧಕ್ಕೆ: ಬಿಜೆಪಿ

08:31 PM Nov 27, 2022 | Team Udayavani |

ಬೆಂಗಳೂರು: ವಂದೇ ಮಾತರಂ ಗೀತೆಗೆ ವಿರೋಧ ವ್ಯಕ್ತಪಡಿಸುವ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ದೇಶದ ಏಕತೆಗಿಂತ ಅಧಿಕಾರಕ್ಕಾಗಿ ಸಮಾಜವನ್ನು ಒಡೆಯುವುದೇ ತಮಗೆ ಮುಖ್ಯ ಎನ್ನುವುದನ್ನು ತೋರಿಸಿದ್ದಾರೆ ಎಂದು ರಾಜ್ಯ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

Advertisement

ವಂದೇಮಾತರಂ ಗೀತೆ ವಿರುದ್ಧ ಸಿದ್ದರಾಮಯ್ಯ ಅವರ ಹೇಳಿಕೆಗೆ ಟ್ವೀಟ್‌ ಮೂಲಕ ತಿರುಗೇಟು ನೀಡಿರುವ ಬಿಜೆಪಿ, ದೇಶದಲ್ಲಿ ಎಲ್ಲ ಧರ್ಮೀಯರು ವಂದೇ ಮಾತರಂ ಗೀತೆಯನ್ನು ಮುಕ್ತ ಮನಸ್ಸಿನಿಂದ ಒಪ್ಪಿಕೊಂಡಿದ್ದಾರೆ. ಆದರೆ ಸಿದ್ದರಾಮಯ್ಯ ಅವರು ಗೀತೆಗೆ ವಿರೋಧ ವ್ಯಕ್ತಪಡಿಸಿ ತಮ್ಮ ಜಿಹಾದಿ ಮನಸ್ಥಿತಿಯನ್ನು ತೋರಿಸಿದ್ದಾರೆ. ಬ್ರಿಟೀಷರು ವಂದೇ ಮಾತರಂ ಹಾಡನ್ನು ವಿರೋಧಿಸಿದ್ದು. ಸಿದ್ದರಾಮಯ್ಯ ಈಗ ಅವರ ಸಾಲಿಗೆ ಸೇರಿದ್ದಾರೆ ಎಂದಿದೆ.

ಓಟ್‌ ಬ್ಯಾಂಕ್‌ ರಾಜಕಾರಣಕ್ಕಾಗಿ ವಂದೇ ಮಾತರಂ ಗೀತೆಗೆ ಅವಮಾನ ಮಾಡುವ ಮೂಲಕ ಭಾರತೀಯರ ಏಕತೆಯ ಭಾವನೆಯನ್ನು ವಿಭಜಿಸುವ ಪ್ರಯತ್ನ ಮಾಡಿದ್ದು, ಭಾರತೀಯರ ಕ್ಷಮೆ ಕೋರಬೇಕು ಎಂದು ಆಗ್ರಹಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next