Advertisement

ಭಾರಿ ಮಳೆ ಸಾಧ್ಯತೆ : ಕರಾವಳಿ ಜಿಲ್ಲೆಗಳಿಗೆ ನಾಲ್ಕು ದಿನ ಆರೆಂಜ್‌ ಅಲರ್ಟ್‌

07:55 PM Jul 17, 2021 | Team Udayavani |

ಬೆಂಗಳೂರು: ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 21ರವರೆಗೆ ಗುಡುಗಿನಿಂದ ಕೂಡಿದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

Advertisement

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಗುಡುಗಿನಿಂದ ಕೂಡಿದ ಭಾರಿ ಮಳೆ ನಿರೀಕ್ಷಿಸಲಾಗಿದ್ದು, ಜು.18 ಮತ್ತು 21ರವರೆಗೆ ನಾಲ್ಕು ದಿನಗಳ ಕಾಲ ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೊಷಿಸಲಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಜುಲೈ 18ರಿಂದ 19ರವರೆಗೆ ಆರೆಂಜ್‌ ಅಲರ್ಟ್‌ ಹಾಗೂ ಜುಲೈ 20 ಮತ್ತು 21ರಂದು ಯೆಲ್ಲೋ ಅಲರ್ಟ್‌ ಕೊಡಲಾಗಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷಿಸಲಾಗಿದ್ದು, 17ರಂದು ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ಮೈಸೂರು ಜಿಲ್ಲೆಗಳಿಗೆ ಜುಲೈ 19ರಂದು ಯೆಲ್ಲೋ ಅಲರ್ಟ್‌ ಕೊಡಲಾಗಿದೆ ಎಂದು ಹವಾಮಾನ ಇಲಾಖೆಗೆ ತಿಳಿಸಿದೆ.

ಇದನ್ನೂ ಓದಿ :ಲಾಕ್‌ ಡೌನ್‌ನಲ್ಲಿ ವಿದ್ಯಾರ್ಥಿಗಳ ಶೂ,ಸಾಕ್ಸ್, ಸ್ವೆಟರ್ ನಲ್ಲಿ ಬಿಬಿಎಂಪಿ ಗೋಲ್‌ಮಾಲ್! ದೂರು

ಉತ್ತರ ಒಳನಾಡಿನಲ್ಲಿ ಮುಂಗಾರು ಚುರುಕು
ನೈರುತ್ಯ ಮುಂಗಾರು ಶನಿವಾರ ರಾಜ್ಯದ ಉತ್ತರ ಒಳನಾಡಿನಲ್ಲಿ ಚುರುಕು ಹಾಗೂ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಕರಾವಳಿ, ಉತ್ತರ ಒಳನಾಡಿನ ಬಹುತೇಕ ಎಲ್ಲ ಸ್ಥಳಗಳು ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ವ್ಯಾಪಕ ಮಳೆಯಾಗಿದೆ. ಮುಖ್ಯವಾಗಿ, ಉತ್ತರ ಕನ್ನಡದ ಗೋಕರ್ಣದಲ್ಲಿ 11 ಸೆಂ.ಮೀ, ಆಗುಂಬೆಯಲ್ಲಿ 10 ಸೆಂ.ಮೀ, ಮಂಕಿ, ಕಾರವಾರ, ಬಸಗೋಡಿನಲ್ಲಿ ತಲಾ 9 ಸೆಂ.ಮೀ, ಉತ್ತರ ಕನ್ನಡದ ಬೇಲಿಕೇರಿಯಲ್ಲಿ 8 ಸೆಂ.ಮೀ. ಮಳೆಯಾಗಿದೆ. ಉಳಿದಂತೆ, ಮಂಗಳೂರು, ಕೋಟ, ಗಾಣಗಾಪುರದಲ್ಲಿ ತಲಾ 6 ಸೆಂ.ಮೀ, ಸುಬ್ರಮಣ್ಯ, ಕಾರ್ಕಳ, ಕೊಲ್ಲೂರು, ಕುಂದಾಪುರ, ಶಿರಾಲಿ, ಹೊನ್ನಾವರ, ಕಲಬುರ್ಗಿಯ ಗುಂಡುಗುರ್ತ್‌ನಲ್ಲಿ ತಲಾ 5 ಸೆಂ.ಮೀ, ಭಟ್ಕಳ, ಕದ್ರಾ, ಮುಲ್ಕಿ, ಉಡುಪಿಯ ಸಿದ್ದಾಪುರ, ಯಾದಗಿರಿಯ ಸೈದಾಪುರ, ಲಿಂಗನಮಕ್ಕಿ, ಸಾಗರ, ತಾಳಗುಪ್ಪದಲ್ಲಿ ತಲಾ 4 ಸೆಂಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next