Advertisement

ಆ.5ರಂದು ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ

10:41 PM Aug 01, 2021 | Team Udayavani |

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಆ.5ರವರೆಗೆ ಗುಡುಗು ಸಹಿತ ವ್ಯಾಪಕ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಾತ್ರ ಕೆಲವೊಮ್ಮ ಸಾಧಾರಣ ಮಳೆ ನಿರೀಕ್ಷೆಯಿದೆ. ಆ.5ರಂದು ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಕೊಡಲಾಗಿದೆ.

Advertisement

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಮುಂದಿನ ಎರಡು ದಿನ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 29 ಹಾಗೂ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಕೋವಿಡ್ 3ನೇ ಅಲೆಯ ಭೀತಿ ನಡುವೆಯೂ ಸುರಸದ್ಮಗಿರಿ ಪ್ರವಾಸಿಗರಿಂದ ಫುಲ್  

ದಕ್ಷಿಣ ಒಳನಾಡಿನಲ್ಲಿ ಭಾನುವಾರ ನೈರುತ್ಯ ಮಾನ್ಸೂನ್‌ ಸಾಮಾನ್ಯವಾಗಿತ್ತು. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗಿದೆ.ದಕ್ಷಿಣ ಕನ್ನಡದ ಸುಬ್ರಮಣ್ಯದಲ್ಲಿ 7 ಸೆಂ.ಮೀ., ಶಿವಮೊಗ್ಗದ ತಾಳಗುಪ್ಪದಲ್ಲಿ 5 ಸೆಂ.ಮೀ., ಶೃಂಗೇರಿ, ಶಿವಮೊಗ್ಗದ ತುಮ್ರಿಯಲ್ಲಿ ತಲಾ 4 ಸೆಂ.ಮೀ., ಉತ್ತರ ಕನ್ನಡದ ಸಿದ್ದಾಪುರ, ಕೊಲ್ಲೂರು, ಉಡುಪಿಯ ಸಿದ್ದಾಪುರ, ಧರ್ಮಸ್ಥಳ, ಮಡಿಕೇರಿ, ಆಗುಂಬೆ, ಚಿಕ್ಕಮಗಳೂರಿನ ಜಯಪುರ, ಕೊಡಗಿನ ಸಂತಹಳ್ಳಿಯಲ್ಲಿ ತಲಾ 3 ಸೆಂ.ಮೀ., ಮೂಡುಬಿದ್ರೆ, ಕದ್ರಾ, ಮಂಚಿಕೆರೆ, ಕಾರ್ಕಳ, ಸೋಮವಾರಪೇಟೆ, ದಾವಣಗೆರೆಯ ತೆಲಿಗಿಯಲ್ಲಿ ತಲಾ 2 ಸೆಂ.ಮೀ.ಮಳೆಯಾಗಿದೆ.

ಉಳಿದಂತೆ, ಕುಂದಾಪುರ, ಸುಳ್ಯ, ಮುಲ್ಕಿ, ಉಪ್ಪಿನಂಗಡಿ, ಪುತ್ತೂರು, ಉತ್ತರ ಕನ್ನಡದ ಜನ್ಮನೆ, ಜಗಲಬೆಟ್‌, ಭಟ್ಕಳ, ಬಾಸಗೋಡ್‌, ಬೇಲಿಕೇರಿ, ಹಲಿಯಾಳ, ಶಿರಾಲಿ, ಹಾವೇರಿ, ಕೊಡಗಿನ ಭಾಗಮಂಡಲ, ಸುಂಟಿಕೊಪ್ಪ, ಹಾರಂಗಿ, ಕುಶಾಲನಗರ, ಕೊಟ್ಟಿಗೆಹಾರ, ರಾಯಲಪಾಡು, ಗೌರಿಬಿದನೂರಿನಲ್ಲಿ ತಲಾ 1 ಸೆಂ.ಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next