Advertisement

ಕರಾವಳಿಯಲ್ಲಿ “ಆರೆಂಜ್‌ ಅಲರ್ಟ್‌’

02:35 AM Jun 27, 2020 | Sriram |

ಮಂಗಳೂರು/ಉಡುಪಿ: ಕಳೆದ ಕೆಲವು ದಿನಗಳಿಂದ ಕರಾವಳಿ ಭಾಗದಲ್ಲಿ ಮುಂಗಾರು ದುರ್ಬಲಗೊಂಡಿದ್ದು, ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಭಾರತೀಯ ಹವಾಮಾನ ಇಲಾಖೆಯು “ಆರೆಂಜ್‌ ಅಲರ್ಟ್‌’ ಘೋಷಣೆ ಮಾಡಿದೆ.

Advertisement

ಈ ವೇಳೆ ಕರಾವಳಿ ಭಾಗದಲ್ಲಿ 115.6 ಮಿ.ಮೀ. ನಿಂದ 204.4 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ.

ಮಂಗಳೂರು ನಗರದಲ್ಲಿ ಶುಕ್ರವಾರದಂದು ಬಿಸಿಲು ಮತ್ತು ಸೆಕೆಯಿಂದ ಕೂಡಿದ ವಾತಾವರಣ ಇತ್ತು. ರಾತ್ರಿ ಭಾರೀ ಮಳೆಯಾಗಿದ್ದು ರಸ್ತೆಯಲ್ಲಿ ನೀರು ನಿಂತ ಕಾರಣ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.

ತಗ್ಗುಪ್ರದೇಶದಲ್ಲಿ ನೀರು ನಿಂತಿದೆ. ಉಡುಪಿ ಜಿಲ್ಲೆಯಲ್ಲಿ ಹೆಚ್ಚಿನ ಕಡೆ ಬಿಸಿಲು ಮತ್ತು ಸೆಕೆಯಿತ್ತು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next