Advertisement

ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರದಿಂದ ಆದೇಶ

10:44 PM Mar 18, 2023 | Team Udayavani |

ಬೆಂಗಳೂರು: ರಾಜ್ಯ ಸರ್ಕಾರ ಕುಂಬಾರ ಸಮುದಾಯಕ್ಕೆ ಸಿಹಿ ಸುದ್ದಿ ನೀಡಿದೆ. “ರಾಜ್ಯ ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ’ ಸ್ಥಾಪಿಸಿ ಶನಿವಾರ ಸರ್ಕಾರ ಆದೇಶ ಹೊರಡಿಸಿದೆ.

Advertisement

ಈ ಕುರಿತು ಟ್ವಿಟರ್‌ನಲ್ಲಿ ಮಾಹಿತಿ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಕುಂಬಾರ ಸಮುದಾಯದ ಬಹುದಿನಗಳ ಬೇಡಿಕೆಯಾಗಿದ್ದ ಕುಂಬಾರ ಅಭಿವೃದ್ಧಿ ನಿಗಮ ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ.

ಈ ನಿಗಮ ಕುಂಬಾರ, ಚಕ್ರಸಾಲಿ, ಕುಲಾಲ ಸೇರಿದಂತೆ ಇನ್ನಿತರ ಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕಾರ್ಯ ನಿರ್ವಹಿಸಲಿದೆ ಎಂದಿದ್ದಾರೆ. ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ 2ಎ ನ ಕ್ರಮ ಸಂಖ್ಯೆ 6 ಎ ಯಿಂದ ಕ್ಯೂವರೆಗೆ ಕ್ರಮವಾಗಿ ಕುಂಬಾರ, ಚಕ್ರಸಾಲಿ ಗುಣಗ, ಗಣಗಿ, ಕೊಡವ, ಕುಲ, ಕುಲಾಲ, ಕುಂಬಾರ್‌, ಕುಂಬಾರ್ಡ್‌, ಕುಮ್ಮಾರ, ಕಸವನ್‌ ,ಮೂಲ್ಯ, ಸಜ್ಜನ ಕುಂಬಾರ, ಖುಮಾರ, ಕುಂಭಾರ, ಖುಂಭಾರ, ಕುಲಾಲರ್‌ ಜಾತಿಗಳ ಅಭಿವೃದ್ಧಿಗಾಗಿ ರಾಜ್ಯ ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next