Advertisement

ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರದಿಂದ ಆದೇಶ

10:44 PM Mar 18, 2023 | Team Udayavani |

ಬೆಂಗಳೂರು: ರಾಜ್ಯ ಸರ್ಕಾರ ಕುಂಬಾರ ಸಮುದಾಯಕ್ಕೆ ಸಿಹಿ ಸುದ್ದಿ ನೀಡಿದೆ. “ರಾಜ್ಯ ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ’ ಸ್ಥಾಪಿಸಿ ಶನಿವಾರ ಸರ್ಕಾರ ಆದೇಶ ಹೊರಡಿಸಿದೆ.

Advertisement

ಈ ಕುರಿತು ಟ್ವಿಟರ್‌ನಲ್ಲಿ ಮಾಹಿತಿ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಕುಂಬಾರ ಸಮುದಾಯದ ಬಹುದಿನಗಳ ಬೇಡಿಕೆಯಾಗಿದ್ದ ಕುಂಬಾರ ಅಭಿವೃದ್ಧಿ ನಿಗಮ ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ.

ಈ ನಿಗಮ ಕುಂಬಾರ, ಚಕ್ರಸಾಲಿ, ಕುಲಾಲ ಸೇರಿದಂತೆ ಇನ್ನಿತರ ಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕಾರ್ಯ ನಿರ್ವಹಿಸಲಿದೆ ಎಂದಿದ್ದಾರೆ. ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ 2ಎ ನ ಕ್ರಮ ಸಂಖ್ಯೆ 6 ಎ ಯಿಂದ ಕ್ಯೂವರೆಗೆ ಕ್ರಮವಾಗಿ ಕುಂಬಾರ, ಚಕ್ರಸಾಲಿ ಗುಣಗ, ಗಣಗಿ, ಕೊಡವ, ಕುಲ, ಕುಲಾಲ, ಕುಂಬಾರ್‌, ಕುಂಬಾರ್ಡ್‌, ಕುಮ್ಮಾರ, ಕಸವನ್‌ ,ಮೂಲ್ಯ, ಸಜ್ಜನ ಕುಂಬಾರ, ಖುಮಾರ, ಕುಂಭಾರ, ಖುಂಭಾರ, ಕುಲಾಲರ್‌ ಜಾತಿಗಳ ಅಭಿವೃದ್ಧಿಗಾಗಿ ರಾಜ್ಯ ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next