Advertisement
ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ವಾರ್ಡನ್ ಆಗಿರುವ ಡಾ. ಶೇಖರ್ ಅವರು ಹುಲಿಯ ಬೇಟೆಗಾಗಿ 1972 ರ ಅರಣ್ಯ ಕಾಯಿದೆ, ಸೆಕ್ಷನ್ 11 (ಎ ) ಅಡಿಯಲ್ಲಿ ಆದೇಶ ನೀಡಿದ್ದಾರೆ.
Related Articles
Advertisement
ಸಂಪೂರ್ಣ ಕಾರ್ಯಾಚರಣೆಯ ವಿಡಿಯೋ ಚಿತ್ರೀಕರಣ ಮತ್ತು ಫೋಟೋಗ್ರಫಿಯನ್ನೂ ಮಾಡಲಾಗುತ್ತಿದೆ.
ಕಳೆದ ಒಂದು ವಾರದಿಂದ ಹುಲಿಯನ್ನು ಜೀವಂತವಾಗಿ ಸೆರೆ ಹಿಡಿಯಲು ನಡೆಸಿದ ಪ್ರಯತ್ನ ಫಲ ನೀಡಿರಲಿಲ್ಲ.
ಸೆಪ್ಟೆಂಬರ್ 24 ರಂದು ದಾನ ಮೇಯಿಸುತ್ತಿದ್ದ 56 ವರ್ಷದ ವ್ಯಕ್ತಿಯೊಬ್ಬರ ಮೇಲೆ ಹುಲಿ ದಾಳಿ ಮಾಡಿತ್ತು, ಆದರೆ ಅರಣ್ಯ ಸಿಬ್ಬಂದಿ ಅವರನ್ನು ರಕ್ಷಿಸಿದ್ದರಾದರೂ ಆಸ್ಪತ್ರೆಗೆ ಸಾಗಿಸುವ ವೇಳೆ ಕೊನೆಯುಸಿರೆಳೆದಿದ್ದರು. ಒಟ್ಟು ನಾಲ್ವರು ವ್ಯಕ್ತಿಗಳು ಸೇರಿ ೨೦ ಕ್ಕೂ ಹೆಚ್ಚು ಸಾಕು ಪ್ರಾಣಿಗಳನ್ನು ಹುಲಿ ಭಕ್ಷಿಸಿದೆ.